ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್

Spread the love

ರಾಮನಗರ: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ ಮತ್ತು ಅವರ ಸರ್ಕಾರಕ್ಕೆ ಮುಟ್ಟಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ನಮ್ಮ ಹೋರಾಟದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಮನಗರದ ಕೆಂಗಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ, ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ,ಹಗರಣದಲ್ಲಿ ಮುಳುಗಿದ ಸರ್ಕಾರದ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದೆಹಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿ ಹೋಗಿದ್ದಾರೆ ಎಂದು ವ್ಯಂಗ್ಯ ವಾಡಿದರು.

Leave a Reply

Your email address will not be published. Required fields are marked *