ಮೈಸೂರು: ಸತತ ಮಳೆಗೆ ರಾಜಧಾನಿ ಬೆಂಗಳೂರು ನಲುಗಿದ್ದಾಯಿತು,ಈಗ ಮೈಸೂರಿನ ಸರದಿ.
ನಿರಂತರ ಮಳೆಗೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆ ಸಮೀಪ ರಸ್ತೆ ಕುಸಿದುಬಿದ್ದಿದ್ದು ಅಪಾಯಕ್ಕೆ ಆಹ್ವಾನ ನೀಡಿದೆ.
ಮಣ್ಣು ಕುಸಿದ ಪರಿಣಾಮ ರಸ್ತೆಯಲ್ಲಿ ಸುಮಾರು 15 ಅಡಿಯಷ್ಟು ಕಂದಕ ಸೃಷ್ಟಿಯಾಗಿದೆ.
ಸ್ಥಳಕ್ಕೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 5 ರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ರಸ್ತೆಯಲ್ಲಿ ಸಂಚರಿಸುವವರು ಹುಷಾರಾಗಿ ಚಲಿಸಬೇಕಿದೆ.ಕಂದಕದ ಸುತ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.