500 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ:ಸಿಎಂ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

500 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ದೂರು ನೀಡಿದ್ದಾರೆ.

8 ಗಣಿ ಗುತ್ತಿಗೆ ನವೀಕರಣದಲ್ಲಿ ಸಿದ್ದರಾಮಯ್ಯ ಅವರು 2015ರಲ್ಲಿ ಅಧಿಕಾರದಲ್ಲಿದ್ದಾಗ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ಪತ್ರಬರೆದಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಅಲ್ಲದೇ ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಹಲವು ವರ್ಷಗಳಿಂದ ಬಾಕಿ ಇದ್ದ ಲೈಸನ್ಸ್ ಕೂಡ ನವೀಕರಣ ಮಾಡಲು ಅನುಮತಿ ನೀಡಿದ್ದರು.

ಹೀಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸಬೇಕೆಂದು ರಾಮಮೂರ್ತಿ ಗೌಡ ಕೋರಿದ್ದಾರೆ.ರಾಜ್ಯಪಾಲರ ಏನು ಹೇಳುತ್ತಾರೊ ಕಾದು ನೋಡಬೇಕಿದೆ.