ಮೈಸೂರು, ಏ.4: ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದ ಕಾರಣ ದಿನೇಶ್ ಅವರು ರಕ್ತದಾನ ಮಾಡಿ ಜೀವ ಉಳಿಸಿ ಮಾದರಿಯಾಗಿದ್ದಾರೆ.
ಇದು ಸೇರಿ 57 ನೆ ಬಾರಿ ರಕ್ತದಾನ ಮಾಡಿದ ದಿನೇಶ್ ಅವರಿಗೆ ಒಂದು ಹೆಜ್ಜೆ ರಕ್ತದಾನಿ ಬಳಗದ ವತಿಯಿಂದ ಅಧ್ಯಕ್ಷ ರಕ್ತದಾನಿ ಮಂಜು ಅಭಿನಂದನೆ ಸಲ್ಲಿಸಿದ್ದಾರೆ.
ಇಂತಹ ಸೇವೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಹಳ ಪುಣ್ಯದ ಕೆಲಸ,ಇದೇ ರೀತಿ ಪ್ರತಿಯೊಬ್ಬರೂ ಕೂಡ ಒಂದು ಹೆಜ್ಜೆ ಮುಂದೆ ಬಂದು ರಕ್ತದಾನ ಮಾಡಿ ಜೀವ ಉಳಿಸಿ ನಮ್ಮ ಜೊತೆ ಕೈಜೋಡಿಸಿ ಎಂದು ರಕ್ತದಾನಿ ಮಂಜು ಮನವಿ ಮಾಡಿದ್ದಾರೆ.