ಮಹಿಳೆಯ ಹಿಂಬಾಲಿಸಿ ಸರ ದೋಚಿ ಗ್ರಾಮಸ್ಥರಿಗೆ‌ ಸಿಕ್ಕಿಬಿದ್ದ ಐನಾತಿ ಕಳ್ಳ

Spread the love

ಮೈಸೂರು: ಜಮೀನಿಗೆ ಹೋಗುತ್ತಿದ್ದ ಮಹಿಳೆಯನ್ನ ಐಸ್ ಮಾರಾಟ ಮಾಡುವ ನೆಪದಲ್ಲಿ ಹಿಂಬಾಲಿಸಿ, ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾದ
ಐನಾತಿ ಸರಗಳ್ಳನನ್ನು ಗ್ರಾಮದವರೆ ಹಿಡಿದ ಪ್ರಕರಣ ಹೂಣಸೂರಿನಲ್ಲಿ ನಡೆದಿದೆ.

ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ಹುಣಸೂರು ತಾಲೂಕು ಹೊಸವಾರಂಚಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಕೆಂಪರಾಜು ಸಿಕ್ಕಿಬಿದ್ದ ಆರೋಪಿ.

ಗ್ರಾಮದ ಜ್ಯೋತಿ ಎಂಬುವರು ಅವರೆಕಾಯಿ ಕೊಯ್ಯಲು ಜಮೀನಿಗೆ ತೆರಳುತ್ತಿದ್ದರು.ಈ ವೇಳೆ ಕೆಂಪರಾಜು ಐಸ್ ಕ್ರೀಂ ಮಾರಾಟ ಮಾಡುವವನಂತೆ ಹಿಂಬಾಲಿಸಿದ್ದಾನೆ.

ಜ್ಯೋತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೆಂಪರಾಜು ಕಲ್ಲು ಎತ್ತಿ ತಲೆಮೇಲೆ ಹಾಕಿ ಕೊಲ್ಲುವ ಬೆದರಿಕೆ ಒಡ್ಡಿ 35 ಗ್ರಾಂ ಚಿನ್ನದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.

ತಕ್ಷಣ ಜ್ಯೋತಿ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.

ಕೆಂಪರಾಜು ನನ್ನು ಪತ್ತೆ ಹಚ್ಚಿದ ಗ್ರಾಮಸ್ಥರು ನಾಲ್ಕು ಧರ್ಮದೇಟು ಹಾಕಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಚಿನ್ನದ ಸರ ವಶಪಡಿಸಿಕೊಂಡ ಹುಣಸೂರು ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.