ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಗೌರ್ನರ್ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಿನೆಗೂ ಅನುಮೋದನೆ ನೀಡಿದ್ದಾರೆ.

ಕೆಲ‌ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೈಕ್ರೋ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿತ್ತು. ಆದರೆ ರಾಜ್ಯಪಾಲರು ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು.

ನಂತರ ರಾಜ್ಯ ಸರ್ಕಾರ ಕೆಲ ಮಾರ್ಮಾಡು ಮಾಡಿ ಮತ್ತೊಮ್ಮೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಕಳುಹಿಸಿದ್ದು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅಂತಿಮವಾಗಿ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.