ಮೈಸೂರು: ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ. ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು.
ನಗರದ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಗುರುವಾರ ಏರ್ಪಡಿಸಿದ್ದ ಏನ್ ಸಮಾಚಾರ…ಮೀಡಿಯಾ ಹಬ್ಬ ಉದ್ಘಾಟಿಸಿ ವಾತನಾಡಿದ ಅವರು
ವಿದ್ಯೆ, ವಸ್ತುನಿಷ್ಠತೆ ,ನಿರಂತರ ಶ್ರಮ, ಸದೃಢ ಮನಸ್ಥಿತಿ,ಈ ಅಂಶಗಳನ್ನು ಪತ್ರಿಕೋದ್ಯಮ ಮತ್ತು ಸಂವಹನದ ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗುತ್ತಾರೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಒಂದೇ ವಿಚಾರದ ಬಗ್ಗೆ ಚರ್ಚಿಸುತ್ತಿದ್ದಾರ,ಇಂದಿನ ತಂತ್ರಜ್ಞಾನದ ದಿನಗಳಲ್ಲಿ ಡಿಜಿಟಲ್ ಬಳಸಿಕೊಳ್ಳುತ್ತಾರೆ. ಮಕ್ಕಳಿಗೆ ಹೆಚ್ಚು ಓದುವ ಹವ್ಯಾಸವಿಲ್ಲ, ನಿಜವಾದ ಪತ್ರಕರ್ತರಾದವರು ಚೆನ್ನಾಗಿ ಓದಬೇಕು, ನೀವು ಬರೆದ ಲೇಖನದ ಬಗ್ಗೆ ವಾತನಾಡಬೇಕು,ಸುದ್ದಿಯಲ್ಲಿ ನಿಖರತೆ ವಸ್ತು ನಿಷ್ಠೆ ಪ್ರಾಮಾಣಿಕತೆ ಇರಬೇಕು ಎಂದು ಸಲಹೆ ನೀಡಿದರು.
ಸತ್ಯಕ್ಕಿಂತ ಸುಳ್ಳು ತುಂಬಾ ವೈರಲ್ ಆಗುತ್ತಿದೆ. ಪತ್ರಿಕೋದ್ಯಮದ ಭವಿಷ್ಯ ನಿಮ್ಮ ಕೈಯಲ್ಲಿದೆ.
ಉತ್ತಮ ಪತ್ರಕರ್ತರು ಆಗಬೇಕು ಎಂದರೆ ಒಂದು ವಿಷಯವನ್ನು ಹೊಸ ತನದಿಂದ ವಿಶ್ಲೇಷಣೆ ವಾಡಬೇಕು, ಜೊತೆಗೆ ಸಮಾಜವನ್ನು ತಿದ್ದುವ ಕೆಲಸ ವಾಗ ಎಂದು ತಿಳಿಸಿದರು.
ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳು ಉತ್ತಮವಾದ ಪತ್ರಕರ್ತರಾಗಿದ್ದಾರೆ. ಡಿಜಿಟಲ್ ಯುಗದಲ್ಲಿ ಸುದ್ದಿಗಳನ್ನು ವಸ್ತುನಿಷ್ಠೆಯಿಂದ ಮಾಡಬೇಕು ಎಂದು ಸಲಹೆ ನೀಡಿದರು.
ಎನ್.ಡಿ.ಟಿ.ವಿ. ಮಾಜಿ ಕಾರ್ಯನಿರ್ವಾಹಕ ಸಂಪಾದಕರಾದ ಮಾಯಾ ಶರ್ಮಾ ಅವರು ಮಾತನಾಡಿ ವಾಹಿತಿ ಪ್ರಮುಖ ಶಕ್ತಿಯಾಗಿ ಪಾತ್ರವಹಿಸುತ್ತದೆ. ಇಂದು ಅನೇಕ ಚಾಲೆಂಜ್ ಎದುರಿಸಬೇಕಿದೆ, ಮೀಡಿಯಾ ಇಂದು ಒನ್ ಸೈಡ್ ಆಗುತ್ತದೆ ಅದರೆ ನಿಮ್ಮಲ್ಲಿ ಎಥಿಕಲ್ ವ್ಯಾಲ್ಯೂ ಇರಬೇಕು. ನಿರಂತರ ಕಲಿಕೆ ಮತ್ತು ಅಭ್ಯಾಸದಿಂದ ತಜ್ಞತೆ ಲಭಿಸುತ್ತದೆ ಎಂದು ಹೇಳಿದರು.
ಫೇಕ್ ನ್ಯೂಸ್ ಬಗ್ಗೆ ಅರಿತುಕೊಳ್ಳಬೇಕು, ವಾಟ್ಸ್ ಅಪ್ ಯೂನಿವರ್ಸಿಟಿಯಿಂದ ಸುಳ್ಳು ಮಾಹಿತಿ ಹರಡುತ್ತಿದೆ. ಎಐ, ಸಾಮಾಜಿಕ ಜಾಲತಾಣದಿಂದ ಒಳಿತೂ ಇದೆ,ಕೆಡಕೂ ಇದೆ. ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ತಿಳಿಸಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯಾಷಾ ಖಾನಂ ಮಾತನಾಡಿ, ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರದ ಬಗ್ಗೆ ಆಲೋಚಿಸುತ್ತಾರೆ. ಅದರಂತೆ ಮಾಧ್ಯಮ ಕ್ಷೇತ್ರದ ಬಗ್ಗೆ ಉತ್ತಮ ಆಲೋಚನೆ ಇರುವುದರಿಂದ ಮಿಡಿಯಾ ಹಬ್ಬ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿಯ ರಿಜಿಸ್ಟ್ರಾರ್ ಸಹನಾ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಮಮತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಮತ್ತಿತರರು ಉಪಸ್ಥಿತದ್ದರು.