ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು

Spread the love

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ‌ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದೆ.

ಮುಡಾ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ.

ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ.

ಅಲ್ಲದೇ ದಿನೇಶ್‌ ಕುಮಾರ್‌ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು‌ ಮನವರಿಕೆಯಾಗಿದ್ದು,ಅವರು
ಅಧಿಕಾರದಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಸರ್ಕಾರ ತಿಳಿಸಿದೆ.