ಮೈಸೂರು: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಕಾವೇರಿ ಕ್ರಿಯಾ ಸಮಿತಿಯಿಂದ ಬೆಂಬಲ ಸೂಚಿಸಿದ್ದೇವೆ ಎಂದು ಸಮಿತಿಯ ಅಧ್ಯಕ್ಷರಾದ ಎಸ್ ಜಯ ಪ್ರಕಾಶ್ ತಿಳಿಸಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ, ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು, ಮಹಾದಾಯಿ ಹಾಗೂ ಕಳಸ ಬಂಡೂರಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಕನ್ನಡ ಚಳವಳಿಗಳ ಅಗ್ರಮಾನ್ಯ ನಾಯಕ ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮೈಸೂರಿನ ಎಲ್ಲಾ ರೈತರು, ವಿಧ್ಯಾರ್ಥಿಗಳು, ಎಲ್ಲಾ ಕಾರ್ಮಿಕರು, ಆಟೋ ಚಾಲಕರು ಮಾಲೀಕರು, ಹೋಟೆಲ್ ಮಾಲೀಕರು ಬಂದ್ ಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮೂಗೂರು ನಂಜುಂಡಸ್ವಾಮಿ, ತೇಜೇಶ್ ಲೋಕೇಶ್ ಗೌಡ, ಬಾಲಕೃಷ್ಣ, ಸುರೇಶ್ ಗೌಡ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ,ವರಕೂಡು ಕೃಷ್ಣೇಗೌಡ, ಸುಬ್ಬೇಗೌಡ, ಕೃಷ್ಣಪ್ಪ ಉಪಸ್ಥಿತರಿದ್ದರು.