ಮೈಸೂರು: ಸಂಸದ ಯದುವೀರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲದಿಂದ ರಾಮಕೃಷ್ಣ ನಗರದ ಹೆಚ್ ಬ್ಲ್ಯಾಕಿನ ಅರೋಗ್ಯ ನಗರದ ಉದ್ಯಾನವನದಲ್ಲಿ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಯದುವೀರ್ ಒಡೆಯರ್ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ ಸಂಭ್ರಮಿಸಲಾಯಿತು.

ಈ ವೇಳೆ ನಗರ ಪ್ರಧಾನ ಕಾರ್ಯದರ್ಶಿ ಬಿ. ಎಂ ರಘು, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ರಾಕೇಶ್ ಭಟ್, ಉಪಾಧ್ಯಕ್ಷರಾದ ಬಿ. ಸಿ. ಶಶಿಕಾಂತ್, ಶಿವಕುಮಾರ್, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ಸೋಮಣ್ಣ, ಮಹಿಳಾ ಮೋರ್ಚಾ ನಗರ ಕಾರ್ಯದರ್ಶಿ ವಿಜಯ ಮಂಜುನಾಥ್,
ಎಸ್ ಟಿ ಮೋರ್ಚಾ ನಗರ ಉಪಾಧ್ಯಕ್ಷರಾದ ತ್ಯಾಗರಾಜ್, ಮಂಡಲದ ರೈತ ಮೋರ್ಚಾ ಅಧ್ಯಕ್ಷರಾದ ಚಂದ್ರಶೇಖರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ರಾಘವೇಂದ್ರ, ಯುವ ಮೋರ್ಚಾ ಉಪಾಧ್ಯಕ್ಷರಾದ ರಾಘವೇಂದ್ರ, ಸಂಜಯ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುಟ್ಟಮ್ಮಣ್ಣಿ, ಮಂಜುಳಾ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ರಂಗೇಶ್ ಹಾಗೂ ಸ್ಥಳೀಯ ನಾಗರೀಕರು ಹಾಜರಿದ್ದು ಗಿಡಗಳನ್ನು ನೆಟ್ಟು ನೀರು ಹಾಕಿದರು.