ಕರಾಚಿ: ಕರಾಚಿಯ ಮಾಲಿರ್ ಜೈಲಿನಲ್ಲಿ ಭಾರತೀಯ ಮೀನುಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌರವ್ ರಾಮ್ ಆನಂದ್(52) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.
ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟಿದ್ದ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಮಾಲಿರ್ ಜೈಲಿನ ಸೂಪರಿಂಟೆಂಡೆಂಟ್ ಅರ್ಷದ್ ಹುಸೇನ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ಕೈದಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಜೈಲಿನ ಕರ್ತವ್ಯ ನಿರತ ವೈದ್ಯರು ಬೆಳಗಿನ ಜಾವ 2.20 ಕ್ಕೆ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್, ಮುಂದಿನ ಕಾನೂನು ಕ್ರಮಗಳು ಮುಗಿಯುವವರೆಗೆ ಅವರ ದೇಹವನ್ನು ಸೊಹ್ರಾಬ್ ಗೋತ್ನಲ್ಲಿರುವ ಈಧಿ ಫೌಂಡೇಶನ್ನ ಕೋಲ್ಡ್ ಸ್ಟೋರೇಜ್ ಸ್ಥಳಾಂತರಿಸಲು ಆದೇಶಿಸಿದ್ದಾರೆ.