ಮೈಸೂರು: ಚಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ- ಕೈಂಕರ್ಯ ನೆರವೇರಿಸಲಾಯಿತು.
ಈ ವೇಳೆ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಇದೇ ವೇಳೆ ದೇವಾಲಯದ ವತಿಯಿಂದ ಹೊರತರಲಾಗಿರುವ ನೂತನ ಸಂವತ್ಸರದ ಕ್ಯಾಲೆಂಡರ್ ಹಾಗೂ ಪಂಚಾಂಗವನ್ನು ಭಕ್ತಾದಿಗಳಿಗೆ ವಿತರಿಸಲಾಯಿತು.
ದೇವಾಲಯದ ಆಡಳಿತಾಧಿಕಾರಿ ಡಾ.ಎನ್.ಶ್ರೀನಿವಾಸನ್,ರಕ್ತದಾನಿ ಮಂಜು, ಸಹನಾ ಗೌಡ, ಗೀತಾ ಮತ್ತಿತರರು ಉಪಸ್ಥಿತರಿದ್ದರು.