ಕೃಷ್ಣರಾಜ ಯುವ ಬಳಗ, ಅಪೂರ್ವಕ ಸ್ನೇಹ ಬಳಗದಿಂದ ಅಂಬೇಡ್ಕರ್ ಜಯಂತಿ

Spread the love

ಮೈಸೂರು: ಕೃಷ್ಣರಾಜ ಯುವ ಬಳಗ ಹಾಗೂ ಅಪೂರ್ವಕ ಸ್ನೇಹ ಬಳಗದ ವತಿಯಿಂದ
ಡಾ ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಯಿತು.

ಮೈಸೂರಿನ ಆದಿಚುಂಚನಗಿರಿ ಮುಖ್ಯರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಕೃಷ್ಣರಾಜ ಯುವ ಬಳಗ ಹಾಗೂ ಅಪೂರ್ವಕ ಸ್ನೇಹ ಬಳಗದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ,ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ ಡಿ ಪಾರ್ಥಸಾರಥಿ,ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಜಿ ರಾಘವೇಂದ್ರ,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್,ಎಸ್ ಎನ್ ರಾಜೇಶ್,ಮಂಜು, ಪಾಂಡು,ಶಂಭು ಹೊಸಮಠ ಮತ್ತಿತರರು ಹಾಜರಿದ್ದರು.