ಮೈಸೂರು: ಬಿಜೆಪಿ ನಗರ ಉಪಾಧ್ಯಕ್ಷರಾದ ಹೇಮಾ ನಂದೀಶ್ ಅವರು ಮೈಸೂರು ವಿಶ್ವವಿದ್ಯಾಲಯದ ಪಿ ಎಚ್ ಡಿ ಪದವಿ ಪಡೆದಿದ್ದು, ಬಿಜೆಪಿ ಮುಖಂಡರು ಅಭಿನಂದಿಸಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮೈಸೂರು ನಗರ ಬಿಜೆಪಿ ವತಿಯಿಂದ ಹೇಮಾ ನಂದೀಶ್ ಅವರಿಗೆ ಮೈಸೂರು ಪೇಟ ತೊಡಿಸಿ,ಶಾಲು ಹೊದಿಸಿ ಹಾರ ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಕೊಡಗು ಸಂಸದರಾದ ಯದುವೀರ್ ಒಡೆಯರ್,
ಬಿಜೆಪಿ ನಗರ ಅಧ್ಯಕ್ಷ ನಾಗೇಂದ್ರ,ಜಿಲ್ಲಾಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ,ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ,ಬಿಜೆಪಿ ಮುಖಂಡರಾದ ಎನ್. ವಿ.ಪಣೀಶ್, ಎಸ್ ಸಿ ಮೋರ್ಚಾ ಅಧ್ಯಕ್ಷ ಶೈಲೇಂದ್ರ, ನಗರ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಕೇಬಲ್ ಮಹೇಶ್, ಎಚ್ ಜಿ ಗಿರಿಧರ್ ಮತ್ತಿತರರು ಶುಭ ಕೋರಿದರು.