ಧರೆಗೆ ಉರುಳಿದ ಶತಮಾನಗಳ ಆಲದ ಮರ

ಮೈಸೂರು,ಮೇ.1: ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿದ್ದ
250 ವರ್ಷಗಳ ಹಿಂದಿನ ಪುರಾತನ ಆಲದ ಮರ ಧರೆಗೆ ಉರುಳಿದೆ.

ಇದರಿಂದಾಗಿ ಲಕ್ಷಾಂತರ ಮೌಲ್ಯದ ಮಾವಿ‌ನ ಬೆಳೆ ನಾಶವಾಗಿದೆ.

ಗ್ರಾಮದ ಬೀರೇಗೌಡ ಎಂಬುವರಿಗೆ ಸೇರಿದ ಆಲದ ಮರ ಭಾರಿ ಮಳೆ ಗಾಳಿಗೆ ಬುಡ ಸಮೇತ ಉರುಳಿ ಬಿದ್ದಿದೆ, ಇದರಿಂದಾಗಿ ಆರು ತೆಂಗಿನ ಮರ, ನಾಲ್ಕು ಮಾವಿನ ಮರಗಳು ಸಂಪೂರ್ಣ ನಾಶವಾಗಿದೆ.

ಎರಡೂವರೆ ಶತಮಾನಗಳ ಕಾಲದ ಆಲದ ಮರ ಉರುಳಿದ ಪರಿಣಾಮ ಮಾವಿನ ಫಸಲು ಸಂಪೂರ್ಣ ನೆಲಕಚ್ಚಿದೆ. ಬಾದಾಮಿ ಮಾವಿನ ಕಾಯಿಗಳು ಸಂಪೂರ್ಣ ನೆಲಕ್ಕುದುರಿದ್ದು ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

ನಾಲ್ಕು ಮಾವಿನ ಮರದಿಂದ ಸುಮಾರು ನಾಲ್ಕು ಟನ್ ಮಾವು ಕಟಾವಿಗೆ ಬಂದಿತ್ತು. ಆದರೆ ಎಲ್ಲಾ ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.