ಕೊಳ್ಳೇಗಾಲದಲ್ಲಿ ಅದ್ದೂರಿಯಾಗಿ ನಡೆದರಾಜಋಷಿ ಶ್ರೀ ಮಹರ್ಷಿ ಭಗೀರಥ ಜಯಂತಿ

ಕೊಳ್ಳೇಗಾಲ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಕೊಳ್ಳೇಗಾಲ ಪಟ್ಟಣದಲ್ಲಿ ರಾಜಋಷಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು

ಜಯಂತಿಯ ಅಂಗವಾಗಿ ನಡೆದ ಬೆಳ್ಳಿ ರಥದ ಬೃಹತ್ ಮೆರವಣಿಗೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ದೇವಲ ಮಹರ್ಷಿ ವೃತ್ತದ ಬಳಿ ಚಾಲನೆ ನೀಡಿದರು.

ಬಳಿಕ ಬೆಳ್ಳಿ ರಥದ ಮೆರವಣಿಗೆ ದೇವಲ ಮಹರ್ಷಿ ವೃತ್ತದಿಂದ ಮಂಗಳವಾದ್ಯ, ಡೊಲು ತಮಟೆ ಸೇರಿದಂತೆ ವಿವಿಧ ಕಲಾತಂಡ ಹಾಗೂ ಸತ್ತಿಗೆಗಳೊಂದಿಗೆ ಡಾ.ವಿಷ್ಣುವರ್ಧನ್ ರಸ್ತೆ, ಡಾ.ರಾಜಕುಮಾರ ರಸ್ತೆ, ಮಸೀದಿ ವೃತ್ತ, ಡಾ.ಅಂಬೇಡ್ಕರ್ ರಸ್ತೆ, ಎಡಿಬಿ ವೃತ್ತ, ಐಬಿ ರಸ್ತೆಯಲ್ಲಿ ಮೂಲಕ ತೆರಳಿ ನ್ಯಾಷನಲ್ ಸ್ಕೂಲ್ ಆವರಣಕ್ಕೆ ತಲುಪಿತು.

ಮೆರವಣಿಗೆಯುದ್ದಕ್ಕೂ ವಿವಿಧ ಗ್ರಾಮದವರು ದೊಣ್ಣೆ ಒರಸೆ ಪ್ರದರ್ಶಿಸಿದರು. ಪಟಾಕಿ ಸಿಡಿಸುವ ಮೂಲಕ ಯುವಕರು ಹಾಗೂ ಮುಖಂಡರು ಡಿ.ಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.ಈ ವೇಳೆ ನಟ ದಿ.ಪುನೀತ್ ರಾಜಕುಮಾರ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದ್ದು‌ ವಿಶೇಷವಾಗಿತ್ತು.

ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರು ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜು ಆಗಮಿಸಿ ಭಗೀರಥ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುಂತೂರು ಮೋಳೆ ರಾಜೇಂದ್ರ, ನಗರಸಭೆ ಅಧ್ಯಕ್ಷೆ ರೇಖಾ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ರಾಜ್ಯ ಉಪ್ಪಾರ ನಿಗಮ ಮಾಜಿ ಅಧ್ಯಕ್ಷ ಶಿವಕುಮಾರ್, ಜಿ.ಪಂ ಮಾಜಿ ಸದಸ್ಯರ ಕೊಪ್ಪಾಳಿ ಮಹದೇವನಾಯಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ,  ಪಿಎಸಿಎಸ್ಎಸ್ ನಿರ್ದೇಶಕ ಮಂಜುನಾಥ್, ಉಪ್ಪಾರ ಸಂಘದ ಅಧ್ಯಕ್ಷ ರಮೇಶ್,ಉಪವಿಭಾಗಾಧಿಕಾರಿ ಮಹೇಶ್, ತಹಶಿಲ್ದಾರ್ ಬಸವರಾಜು ಮತ್ತಿತರರು ಹಾಜರಿದ್ದರು.