ಜನಾಕ್ರೋಶ ನೋಡಿ ಉಲ್ಟಾ ಹೊಡೆದ ಸಿಎಂ-ಅಶೋಕ್ ಗೇಲಿ

Spread the love

ಬೆಂಗಳೂರು: ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಪಾಕಿಸ್ತಾನದ ಪರ ವಕಾಲತ್ತು ವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಜನಾಕ್ರೋಶ ನೋಡಿ ಉಲ್ಟಾ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಅಪರೇಷನ್ ಸಿಂಧೂರ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಿದ್ದಂತೆ ಟ್ವೀಟ್ ಮೂಲಕ ಶಾಂತಿ ಜಪ ಮಾಡಿ ಜನರ ಕೈಯಲ್ಲಿ ಉಗಿಸಿಕೊಂಡ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿ ಟ್ವೀಟ್ ಡಿಲೀಟ್ ಮಾಡಿತ್ತು ಎಂದು ಅಶೋಕ್ ಟ್ವೀಟ್ ಮಾಡಿ ಗೇಲಿ ಮಾಡಿದ್ದಾರೆ‌

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.