ಸುತ್ತೂರು ಶಾಖ ಮಠಕ್ಕೆ ಮಾಜಿ ಸಚಿವ ದೇಶಪಾಂಡೆ ಭೇಟಿ

Spread the love

ಮೈಸೂರು: ಕಾರ್ಯನಿಮಿತ ಇಂದು ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಸುತ್ತೂರು ಶಾಖ ಮಠಕ್ಕೆ ಭೇಟಿ ನೀಡಿದರು.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸೂತ್ತೂರು ಶಾಖ ಮಠಕ್ಕೆ ಭೇಟಿ ನೀಡಿದ
ಆರ್ ವಿ ದೇಶಪಾಂಡೆ ಅವರು ಶ್ರೀಗಳ ಆಶೀರ್ವಾದ ಪಡೆದರು.

ಈ ವೇಳೆ ಮೂಡ ಮಾಜಿ ಆಯುಕ್ತರಾದ ಬೆಟ್ಟಸೂರ್ ಮಠ್ ಅವರು ದೇಶಪಾಂಡೆ ಅವರನ್ನು ಸನ್ಮಾನಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್, ಜೈಸಿಂಹ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಸುಜಾತಾ ರಾವ್, ದಿನೇಶ್ ಗುಂಡೂರಾವ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಯ್ ಕಣಗಾಲ್, ಡಿಸಿಸಿ ರಘು ಸಿ. ಎಸ್, ಆನಂದ, ಗಾಂಧಿನಗರ ಪ್ರಕಾಶ್, ಪವನ್ ಮತ್ತು ಕಾರ್ಯಕರ್ತರು ಹಾಜರಿದ್ದರು.