ಜಾಗೇರಿಯಲ್ಲಿ ಜನರ ಕುಂದು ಕೊರತೆ ಆಲಿಸಿದ ಶಾಸಕ ಎಂ.ಆರ್ ಮಂಜುನಾಥ್

Spread the love

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ತಾಲೂಕಿನ ಜಾಗೇರಿಯ ವಿವಿಧ ಗ್ರಾಮಗಳಿಗೆ ಬೇಟಿ ನೀಡಿದ ಶಾಸಕ ಎಂ.ಆರ್ ಮಂಜುನಾಥ್ ಅವರು ಗ್ರಾಮಗಳ ಜನರ ಕುಂದು ಕೊರತೆ ಆಲಿಸಿದರು.

ಇಲ್ಲಿನ ಪಾಸ್ಕಲ್ ನಗರದ ಅಲ್ಪಸಂಖ್ಯಾತ ಬೀದಿಯಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಗ್ರಾಮಸ್ಥರು ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಹಾಗೂ ಕಾಡಂಚಿನ ಪ್ರದೇಶದ ವ್ಯಾಪ್ತಿಯಲ್ಲಿ ಉಳುಮೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗೆ ಬಿಡುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಈಗಾಗಲೇ ಸರ್ವೆ ನಡೆಯುತ್ತಿದ್ದು ಇದು ಮುಗಿದ ನಂತರ ಸಂಪೂರ್ಣ ಮಾಹಿತಿ ಸಿಗಲಿದೆ, ತದನಂತರ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಂತರ ಶಾಸಕರು ಇಲ್ಲಿನ ಶಾಂತಿ ನಗರಕ್ಕೆ ಬೇಟಿ ನೀಡಿದಾಗ ಜನರು ಗ್ರಾಮದಲ್ಲಿ ಕುಡಿಯುವ ನೀರು,ರಸ್ತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಕೊರತೆಗಳಿದ್ದು ಕೂಡಲೇ ಬಗೆಹರಿಸುವಂತೆ ಶಾಸಕರಲ್ಲಿ ಮನವಿ ನೀಡಿದರು.

ಶಾಂತಿ ನಗರದ ಜನತೆ ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿದ್ದು, ಮುಖ್ಯವಾಗಿ ಪಶುವೈದ್ಯ ಆಸ್ಪತ್ರೆ,ಅಂಗನವಾಡಿ, ವಿದ್ಯುತ್, ಕುಡಿಯುವ ನೀರಿನ ತೊಂಬೆ ನಿರ್ಮಾಣ ಹಾಗೂ ಶಾಲಾ ಕಾಂಪೌಂಡ್ ನಿರ್ಮಾಣ ಮಾಡಲು ಮನವಿ ಮಾಡಿದರು.

ಜನರ ಕುಂದು ಕೊರತೆ ಆಲಿಸಿ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್ ಅವರು, ಜಾಗೇರಿಯ ರೈತರಿಗೆ ಯಾವುದೇ ರೀತಿಯಲ್ಲೂ ತೊಂದರೆ ಯಾಗಲು ಬಿಡುವುದಿಲ್ಲ, ಇಲ್ಲೇ ವಾಸವಾಗಿದ್ದರು ಅವರಿಗೆ ಆಸ್ತಿ ಹಾಗೂ ಮನೆಗಳನ್ನು ಕಟ್ಟಲು ಅವಕಾಶ ನೀಡದ, ಕಾಡಂಚಿನ ಪ್ರದೇಶದ ಭಾಗದಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ತೊಂದರೆ ಕೂಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮವಹಿಸಲಾಗವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲ್ಲೇಶ್, ಫಾದರ್ ನೆಹರು ಮುತ್ತು, ಡಿ ಆರ್ ಹಾರ್ಡವೇರ್ ಸೀನಪ್ಪ, ಸಿಂಗಾನಲ್ಲೂರು ರಾಜಣ್ಣ, ಪ್ರಭುಸ್ವಾಮಿ, ವಿಜಯ್ ಕುಮಾರ್, ಪನ್ನಾಡಿ, ತಂಗವೇಲು ಮತ್ತಿತರರು ಹಾಜರಿದ್ದರು.