ಹುಣಸೂರು, ಜು.2: ಹುಣಸೂರಿನ ತಟ್ಟೆಕೆರೆಯ ಶ್ರೀ ಮಾರುತಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರ ನೇತೃತ್ವದಲ್ಲಿ ಶ್ರೀ ಮಾರುತಿ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ನೀಡಲಾಯಿತು.
ಈ ಬಾರಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ವತಿಯಿಂದ ಸರ್ಕಾರಿ ಶಾಲೆಯ ಒಂದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ಕೊಡುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಈ ಗುರಿ ತಲುಪುವ ಹಂತದಲ್ಲಿದೆ.
ಇಂದು ಮಾರುತಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆಯ ಧನಂಜಯ ಅವರು ಪಾಲ್ಗೊಂಡಿದ್ದರು ಮತ್ತು ಚಲುವರಾಜು ಅವರ ಈ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಲಕ್ಷ್ಮಿಕಾಂತ,ಸಹ ಶಿಕ್ಷಕರುಗಳಾದ ಪುಟ್ಟೇಗೌಡ ವೈ.ಜೆ, ಮಾನಸ, ಪುಷ್ಪಲತಾ ಬಿ. ಎಸ್, ಶ್ರೀಧರ. ಎ,ಬಾಲೆಸಾಬ್ ಕನ್ಯಾಳ,ಮೆಹಬೂಬುನ್ನಿಸ ಮತ್ತು ಶಾಲೆಯ ಸಿಬ್ಬಂದಿ ವಿ.ಎನ್.ಗಿರೀಶ್ ಮತ್ತಿತರರು ಹಾಜರಿದ್ದರು.