ಚಾಮುಂಡಿ ಬೆಟ್ಟದ ಮಹಿಳಾ ಸಿಬ್ಬಂದಿಗೆಬಾಗಿನ ವಿತರಣೆ

Spread the love

ಮೈಸೂರು: ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಸೀರೆ ಬಳೆ ಅರಿಶಿನ ಕುಂಕುಮ ಸಹಿತ ಬಾಗಿನ ವಿತರಿಸಿ ಶ್ರೀ ದುರ್ಗಾ ಫೌಂಡೇಶನ್ ಮಾದರಿಯಾಗಿದೆ.

ಶ್ರೀದುರ್ಗಾ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಸಹಿತ ಬಾಗಿನ ಸಮರ್ಪಣೆ ಮಾಡಲಾಯಿತು,

ಈ ವೇಳೆ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್
ಮಾತನಾಡಿ, ಪುರಾಣಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಷಾಡ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ, ಪ್ರತಿನಿತ್ಯ ಸೇವೆ ಸಲ್ಲಿಸುವ ಮಹಿಳಾ ಭದ್ರತಾ ಸ್ವಚ್ಛತಾ ಸಿಬ್ಬಂದಿಗಳನ್ನ ಗೌರವಿಸಿ ಬಾಗಿನ ಸಮರ್ಪಣೆ ಮಾಡುತ್ತಿರುವುದು ಅರ್ಥಪೂರ್ಣವಾದುದು ಎಂದು ಹೇಳಿದರು.

ಬೆಟ್ಟಕ್ಕೆ ಬರುವ ಭಕ್ತಧಿಗಳು ಭಕ್ತಿಯ ಜೊತೆಯಲ್ಲೆ ಪ್ಲಾಸ್ಟಿಕ್ ತರದ ಹಾಗೇ ಪರಿಸರ ಸಂರಕ್ಷಣೆ ಕಾಳಜಿ ಸಂಕಲ್ಪ ತೊಡಬೇಕು, ಧಾರ್ಮಿಕ ಪರಂಪರೆ ಉಳಿಯಬೇಕಾದರೆ ಪರಿಸರ ಸಂರಕ್ಷಣೆಯೂ ಬಹಳ ಮುಖ್ಯವಾಗುತ್ತದೆ ಎಂದು ತಿಳಿಸಿದರು.

ಮಹಿಳೆಯರಲ್ಲಿ ಧರ್ಮ ಜಾಗೃತಿ ಮತ್ತು ಧಾರ್ಮಿಕ ಸಾಮರಸ್ಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷದಂತೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಬಾಗಿನ ಅರ್ಪಣೆ ಆಯೋಜಿಸುತ್ತಾ ಬಂದಿದ್ದಿದೇವೆ ಮುಂದಿನ ದಿನದಲ್ಲಿ ಮಹಿಳಾ ಸಂಘಟನೆಗಳ ಸಹಯೋಗದೊಂದಿಗೆ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ಮಹಿಳಾ ಕಾರ್ಮಿಕರಲ್ಲಿ ಅರಿಶಿನ ಕುಂಕುಮದ ಮಹತ್ವ ಮತ್ತು ಪುರಾಣ ಪ್ರಸಿದ್ಧ ಹಬ್ಬಗಳ ಪರಂಪರೆ ಮತ್ತು ಆಚರಣೆಯ ಮಹತ್ವ ಸಾಮರಸ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಚಾಮುಂಡಿ ಬೆಟ್ಟದ ಪರಿಸರ ಸೌಂದರ್ಯ ಕಾಪಾಡಲು ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನ ಸಂಪೂರ್ಣ ನಿಷೇಧಿಸಿದೆ ಅದರ ನಿಯಮಗಳನ್ನ ಸಾರ್ವಜನಿಕರು ಪಾಲಿಸಿ ಕೈಜೋಡಿಸಿದರೇ ಮಾತ್ರ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗುತ್ತದೆ ಎಂದು ರೇಖಾ ಶ್ರೀನಿವಾಸ್ ತಿಳಿಸಿದರು.

ಈ ಸಂದರ್ಭದಲ್ಲಿ ಕೆ ವಿ ಕೆ ಫೌಂಡೇಶನ್ ಅಧ್ಯಕ್ಷರಾದ ಖುಷಿ ವಿನು, ಸವಿತಾ ಘಾಟ್ಕೆ, ಜಯಶ್ರೀ ಶಿವರಾಮ್,ರೂಪ, ವಿದ್ಯಾ, ಸಮಾಜ ಸೇವಕರಾದ ಶಾಂತಮ್ಮ ಮತ್ತಿತರರು ಹಾಜರಿದ್ದರು.