ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ತಂಡ ಡ್ರಗ್ ಉತ್ಪಾದನೆ ಮಾಡುವ ಘಟಕದ ಮೇಲೆ ದಾಳಿ ಮಾಡಿ ಸುಮಾರು ಐವತ್ತು ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಈ ಜಾಲವನ್ನು ಮಟ್ಟ ಹಾಕಬೇಕೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ನರಸಿಂಹರಾಜ ಪೋಲಿಸ್ ಠಾಣೆಯ ನಿರೀಕ್ಷಕರಾದ ಲಕ್ಷ್ಮಿ ಕಾಂತ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ,ಆದರೆ ಮೈಸೂರಿನಲ್ಲಿ ಡ್ರಗ್ಸ್ ಜಾಲ ಇರುವುದನ್ನು ಅರಿಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಯಿತೆ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪ್ರಶ್ನಿಸಿದ್ದಾರೆ.
ಹಾಗುದ್ದಮೇಲೆ ಗುಪ್ತಚರ ಇಲಾಖೆ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೆ ಎಂದು ಅವರು ಆಗ್ರಹಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಠಾಣೆ ವ್ಯಾಪ್ತಿಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಸ್ಥಳವೊಂದರಲ್ಲಿ ಕೋಟ್ಯಂತರ ಮೌಲ್ಯದ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ದಲ್ಲಿ ಸಿಕ್ಕಿಬಿದ್ದ ಡ್ರಗ್ ಪೆಡ್ಲರ್ ನೀಡಿದ ಮಾಹಿತಿಯಾಧರಿಸಿ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಆಗಮಿಸಿ ಸ್ಥಳೀಯ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ 50 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ
ಡ್ರಗ್ ಜಾಲದ ನಂಟು ಮೈಸೂರಿಗೆ ಹರಡಿರುವುದರಿಂದ ಜನರಲ್ಲಿ ಆತಂಕ ಉಂಟು ಮಾಡಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಡ್ರಗ್ ಮಾರಾಟ ಜಾಲದ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಮತ್ತು ಕೊಕ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಶಾಶ್ವತವಾಗಿ ಮೈಸೂರಿನಿಂದ ಗಡಿಪಾರು ಮಾಡಬೇಕು ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.