ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ

Spread the love

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದು ಕೆಲಕಾಲ ಆತಂಕ ವುಂಟಾಯಿತು.

ಆ ವ್ಯಕ್ತಿ ಬೆಳಿಗ್ಗೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಿ ಬೆದರಿಕೆಯೊಡ್ಡಿದ್ದ‌ ಇದರಿಂದ ಅಧಿಕಾರಿಗಳೇ ಶಾಕ್ ಗೆ ಒಳಗಾದರು.

ತನಿಖೆ ಸಮಯದಲ್ಲಿ, ಕರೆ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿದ್ದು, ನಾಗ್ಪುರ ನಗರದ ಸಕ್ಕರ್ದಾರ ಪ್ರದೇಶದ ವಿಮಾ ದವಾಖಾನಾ ಬಳಿಯ ತುಳಸಿ ಬಾಗ್ ರಸ್ತೆಯ ನಿವಾಸಿ ಉಮೇಶ್ ವಿಷ್ಣು ರಾವುತ್ ಎಂಬಾತ ಕರೆ ಮಾಡಿದ್ದಾನೆಂದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಲೊಕೇಶನ್ ಮತ್ತು ತಾಂತ್ರಿಕ ನೆರವಿನಿಂದ ಪೊಲೀಸರು ವಿಮಾ ದವಾಖಾನಾದ ಆವರಣದಿಂದ ರಾವುತ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಳಲಿಸಿ,ವಿಚಾರಣೆಗೆ ಒಳಪಡಿಸಿದ್ದಾರೆ.