ಸನಾತನ ಹಿಂದೂ ಧರ್ಮದಲ್ಲಿ ವೇದ, ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವ: ಶ್ರೀನಿವಾಸನ್

ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಪ್ರರು ಸಾಮೂಹಿಕ ಋಗ್ವೇದ ಹಾಗೂ ಯಜುರುಪಾಕರ್ಮ ಹಮ್ಮಿಕೊಂಡರು.

ಸಾಮೂಹಿಕವಾಗಿ ಬ್ರಾಹ್ಮಣರು ಯಜ್ಞೋ ಪವಿತ್ರಂ ಜನಿವಾರ ಬದಲಾಯಿಸಿಕೊಂಡು, ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸುವ ಮೂಲಕ ಯಜುರುಪಾಕರ್ಮ
ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ಅವರು,ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ ಎಂದು ತಿಳಿಸಿದರು.

ಹಿಂದೆ 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆ ಇತ್ತು, ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದಿಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ ಎಂದು ಹೇಳಿದರು.

ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ ಎಂದರೆ ಅದು ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದು ತಿಳಿಸಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್,ಅಶ್ವಿನ್, ಶ್ರೀರಾಮ್
ಮತ್ತಿತರರು ಹಾಜರಿದ್ದರು.