ಮುಜರಾಯಿ ಇಲಾಖೆಯಿಂದದೇವಾಲಯಗಳನ್ನ ಮುಕ್ತಗೊಳಿಸಿ:ಸುಬುಧೇಂದ್ರ ಶ್ರೀ ಆಗ್ರಹ

Spread the love

ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಆಗ್ರಹಿಸಿದ್ದಾರೆ.

ರಾಯಚೂರಿನಲ್ಲಿ ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ದೇವಸ್ಥಾನ, ಮಠಗಳು ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆಯಾಗುತ್ತಿತ್ತು.

ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶಕ್ಕೆ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ ಪ್ರಕರಣದಂತ ತೊಂದರೆಗಳು ಆಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಆಯಾ ಪ್ರಾಂತದ ಮಠ, ದೇವಾಲಯಗಳು ಅಲ್ಲಿನ ಜನರ ನೇತೃತ್ವದಲ್ಲಿ ನಡೆಯಬೇಕು. ಇದಕ್ಕೆ ಸನಾತನ ಧರ್ಮ‌ ಪರಿರಕ್ಷಣ ಸಂಬಂಧ ಯೋಜನೆಯನ್ನ ನಾವು ಕೂಡ ಬೆಂಬಲಿಸುತ್ತೇವೆ ಎಂದು ಹೇಳಿದರು.

ನಮ್ಮ ಊರಿನ ಆಚಾರ-ಸಂಪ್ರದಾಯ ಬಗ್ಗೆ ಬೇರೆ ಯಾರೋ ಬಂದು ಹೇಳುವುದಲ್ಲಾ. ನಮ್ಮ ಊರಿನ ಹಿರಿಯರು, ಸಮುದಾಯದ ಹಿರಿಯರು, ವಿದ್ವಾಂಸರು, ಮಠಾಧೀಶರ ನೇತೃತ್ವದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಮುಜರಾಯಿ ಇಲಾಖೆಯಿಂದ ಮಠ ಮಾನ್ಯಗಳು, ದೇವಾಲಯ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮುಕ್ತವಾಗಬೇಕು ಎಂದು ಸುಬುಧೇಂದ್ರ ತೀರ್ಥ ಶ್ರೀಗಳು ಆಗ್ರಹಿಸಿದರು.