ಮೈಸೂರು: ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿದ್ದನ್ನು ಸ್ವಾಗತಿಸಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಸಿಹಿ ವಿತರಿಸಿ ಖುಷಿ ಪಟ್ಟರು.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಮಾಡುವ ಮೂಲಕ ಸಾಹಸಸಿಂಹ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸ್ವಾಗತಿಸಿ,ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನ ಅಗ್ರಹಾರ ವೃತ್ತದಲ್ಲಿ ವಿಷ್ಣು ಅವರ ಭಾವಚಿತ್ರ ಹಿಡಿದು ನೆಚ್ಚಿನ ನಟನಿಗೆ ಜೈಕಾರ ಕೂಗುತ್ತಾ ಸಿಹಿ ಹಂಚಿ ಸಂಭ್ರಮಿಸಿದರು.
ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಈ ವೇಳೆ ಹೂ ಮಾರುವವರು,ಹಣ್ಣು ಮಾರುವವರು ಸೇರಿದಂತೆ ಸುತ್ತಮುತ್ತಲಿನ ಜನರಿಗೆ,ವಾಹನ ಸವಾರರಿಗೆ ಸಿಹಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ ಅವರು, 75ನೇ ವರ್ಷದ ಸಂದರ್ಭದಲ್ಲಿ ವಿಷ್ಣುವರ್ಧನ್ ರವರಿಗೆ ಜಯ ಸಿಕ್ಕಿದೆ ಎಂದು ಖುಷಿ ಪಟ್ಟರು.
ವಿಷ್ಣುವರ್ಧನ್ ವಿಚಾರದಲ್ಲಿ ಪದೇ ಪದೇ ತೊಂದರೆ ಕೊಡುತ್ತಾ ಬಂದಿದ್ದರೂ ಕೂಡಾ ಅಭಿಮಾನಿಗಳು ಸಹನೆ ಹಾಗೂ ಶಾಂತಿ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು, ಆದರೆ ರಾತ್ರೋರಾತ್ರಿ ಅವರ ಪುಣ್ಯಭೂಮಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ,ಕನ್ನಡದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವನ್ನು ಉಂಟು ಮಾಡಿದರು, ಆದರೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಕ್ಕೆ ಅಭಿಮಾನಿಗಳ ಪರ ಅಭಿನಂದನೆ ಸಲ್ಲಿಸುತ್ತೇವೆ, ಈ ಕೂಡಲೇ ಪುಣ್ಯ ಭೂಮಿಯ ಕೆಲಸವನ್ನು ಪ್ರಾರಂಭಿಸಿ ನಿಮ್ಮೊಡನೆ ಎಂದಿಗೂ ವಿಷ್ಣು ಅಭಿಮಾನಿಗಳು ಇರುತ್ತೇವೆ ಎಂದು ಸಾರುತ್ತೇವೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಶಿವರಾಂ, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಮಡಿವಾಳ ಸಂಘದ ರಾಜ್ಯಾಧ್ಯಕ್ಷ ರವಿ, ಸಂತೋಷ್, ಕುಮಾರ್ ಆರಾಧ್ಯ, ರಂಗನಾಥ್, ಅಭಿ, ಲಕ್ಷ್ಮಣ್, ಮಹದೇವ್, ಜಗದೀಶ್, ನಾಗೇಶ್, ಕಿರಣ್ ಮತ್ತಿತರರು ಹಾಜರಿದ್ದರು.
