ಸರಣಿ‌ ಅಪಘಾತ:ಬಾಲಕ ಸಾವು; ಮೂವರು ಸಹೋದರರು ಗಂಭೀರ

Spread the love

ಚಾಮರಾಜನಗರ: ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಒಬ್ಬರು ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.

ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ಲಾರಿ, ಕಾರು, ದ್ವಿಚಕ್ರವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ 10 ವರ್ಷದ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿವಿಎಸ್ ಎಕ್ಸ್ ಎಲ್ ನಲ್ಲಿ ನಾಲ್ವರು ಅಪ್ರಾಪ್ತ ಸಹೋದರರು ತೆರಳುತ್ತಿದ್ದರು.
ನಿಯಂತ್ರಣ ತಪ್ಪಿ ಲಾರಿಗೆ ಟಿವಿಎಸ್ ಎಕ್ ಎಲ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಹೋದರರಾದ ಆದಾನ್ ಪಾಷ, ಫೈಸಲ್, ರಿಯಾಜ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.