(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)
ಚಾಮರಾಜನಗರ: ಬಸ್ಸಿನ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ ನಡೆದಿದೆ.
ಕಾಡಹಳ್ಳಿಯ ಮಲ್ಲಪ್ಪ ಎಂಬುವವರ ಮಗ ಶಿವ ಮಲ್ಲಪ್ಪ ಮೃತ ದುರ್ದೈವಿ.
ಸರ್ಕಾರಿ ಬಸ್ ನಿಲ್ದಾಣ ಸಮೀಪ ಇರುವ ಮಸೀದಿ ಮುಂಭಾಗ ಬಸ್ ನಿಲ್ದಾಣದಿಂದ ಬರುತ್ತಿದ್ದ ಬಸ್ಸಿಗೆ ಬೈಕ್ ಸವಾರ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.