ಮೈಸೂರು: ಸರ್ಕಾರ ಸೆ.22 ರಿಂದ ಆರಂಭಿಸಲಿರುವ ಜಾತಿ ಜನಗಣತಿಯಲ್ಲಿ ಬ್ರಾಹ್ಮಣ ಸಮುದಾಯದ ಪ್ರತಿಯೊಬ್ಬರು ಜವಾಬ್ದಾರಿಯಿಂದ ಭಾಗವಹಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಎಚ್. ವಿ ರಾಜೀವ್ ತಿಳಿಸಿದರು.
ನಗರದ ಚಾಮುಂಡಿಪುರಂನಲ್ಲಿರುವ ಶಾರದಾ ನಿಕೇತನ ವಿದ್ಯಾರ್ಥಿ ನಿಲಯದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವಿಪ್ರ ಸಮುದಾಯದವರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಹಮ್ಮಿಕೊಂಡಿದ್ದ ಜಾತಿ ಗಣತಿ ಅರಿವು ಕಾರ್ಯಗಾರದ ಸಮುದಾಯದ ಸಭೆಯನ್ನು ಉದ್ದೇಶಿಸಿ ರಾಜೀವ್ ಮಾತನಾಡಿದರು.
ಹಲವು ದಶಕಗಳ ನಂತರ ಜಾತಿ ಗಣತಿಯನ್ನು ಮಾಡಲಾಗುತ್ತಿದ್ದು, ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮೀಸಲು ವಿಷಯದಲ್ಲಿ ಜಾತಿ ಗಣತಿ ಪ್ರಮುಖ ಪಾತ್ರ ವಹಿಸಲಿದೆ,ಹೀಗಾಗಿ ಪ್ರತಿಯೊಬ್ಬರೂ ಈ ಜಾತಿ ಗಣತಿಯಲ್ಲಿ ಪಾಲ್ಗೊಳ್ಳಬೇಕು,ಯಾವುದೇ ಗೊಂದಲಕ್ಕೆ ಒಳಗಾಗದೆ ನೈಜ್ಯ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ನೀಡಿದರು.
ಜಾತಿ ವಿಷಯದಲ್ಲಿ ಹಿಂದು ಬ್ರಾಹ್ಮಣ ಎಂದಷ್ಟೇ ನಮೋದಿಸಬೇಕು ಎಂದು ರಾಜೀವ್ ಹೇಳಿದರು.
ಇದೇ ವೇಳೆ ಹಲವರು ಸಮೀಕ್ಷೆ ಬಗೆಗಿದ್ದ ಗೊಂದಲಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಗೊಂದಕ ಪರಿಹರಿಸುವ ಕೆಲಸವನ್ನು ಹೆಚ್.ವಿ.ರಾಜೀವ್ ಮಾಡಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಮೈಸೂರಿನ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್ ಮಾತನಾಡಿ, ಹಿಂದು ಬ್ರಾಹ್ಮಣ ಎಂದು ವಿಪ್ರ ಸಮುದಾಯದ ಎಲ್ಲಾ ಮುಖಂಡರು ತಮ್ಮ ವ್ಯಾಪ್ತಿಯಲ್ಲಿ ಸಮುದಾಯದವರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ ಅವರಿಗೆ ಸರಕಾರದಿಂದ ಸೂಕ್ತ ಮೀಸಲು ಜೊತೆಗೆ ಸೌಲಭ್ಯ ಸಿಗಬೇಕಾದರೆ ಪ್ರತಿಯೊಬ್ಬರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ನಂ ಶ್ರೀಕಂಠಕುಮಾರ್ ಅವರು ಪಿಪಿಟಿ ಮೂಲಕ
ಸಮೀಕ್ಷೆಯಲ್ಲಿ ಯಾವ ರೀತಿಯ ಪ್ರಶ್ನೆಗಳು ಬರಲಿವೆ ಅದಕ್ಕೆ ಹೇಗೆಲ್ಲ ಉತ್ತರಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು,
ಸಭೆಯಲ್ಲಿ ವಿವಿಧ ಬ್ರಾಹ್ಮಣ ಸಮುದಾಯದ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ವಿಶ್ವನಾಥಯ್ಯ, ಜಿಲ್ಲಾ ಪ್ರತಿನಿಧಿ ಡಾ.ಲಕ್ಷ್ಮಿ ದೇವಿ ಮತ್ತಿತರರು ಉಪಸ್ಥಿತರಿದ್ದರು.