ಮೈಸೂರು: ದಸರಾ ಮತ್ತು ನವರಾತ್ರಿ ಪ್ರಯುಕ್ತ ಮೈಸೂರಿನ ಬಹುತೇಕ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಅಲಂಕಾರ ಮಾಡಲಾಗುತ್ತದೆ.
ನಗರದ ಅಗ್ರಹಾರ ಕೆ ಆರ್ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ಶ್ರೀ ನವಗ್ರಹ, ಶ್ರೀ ಮೃತ್ಯುಂಜಯೇಶ್ವರ,ಶ್ರೀ ಪಾರ್ವತಿ ದೇವಾಲಯದಲ್ಲೂ ವಿಶೇಷ ಪೂಜಾಕಾರ್ಯ ನೆರವೇರಿಸಲಾಗುತ್ತಿದೆ.
ಶಿವಾರ್ಚಕರಾದ ಎಸ್.ಯೋಗಾನಂದ ಅವರ ಪುತ್ರ ಅಭಿನಂದನ್ ಅವರು ತಾಯಿ ಪಾರ್ವತಿಗೆ ವಿಶೇಷ ಅಲಂಕಾರ ಮಾಡಿದ್ದು ಭಕ್ತರ ಮನ ಸೂರೆಗೊಂಡಿದೆ.
ನವರಾತ್ರಿ ಮೊದಲ ದಿನ ಕುಂಕುಮ ಅಲಂಕಾರ ಮಾಡಲಾಗಿತ್ತು,ಎರಡನೆ ದಿನ ಭಸ್ಮಾಲಂಕಾರ ಮಾಡಲಾಗಿದ್ದು ತಾಯಿಯನ್ನು ನೋಡಲು ಎರಡು ಕಣ್ಣು ಸಾಲದು ಎಂಬಂತಿದೆ.