ತಾಯಿ ಪಾರ್ವತಿಗೆ ಚಂದ್ರಘಂಟಾ ಅಲಂಕಾರ

Spread the love

ಮೈಸೂರು: ದಸರಾ ಮತ್ತು ‌ನವರಾತ್ರಿ ಪ್ರಯುಕ್ತ ಮೈಸೂರಿನ ದೇವಾಲಯಗಳಲ್ಲಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ.

ನಗರದ‌ ಅಗ್ರಹಾರ‌‌ ಕೆ ಆರ್ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ಶ್ರೀ ನವಗ್ರಹ, ಶ್ರೀ ಮೃತ್ಯುಂಜಯೇಶ್ವರ,ಶ್ರೀ ಪಾರ್ವತಿ ದೇವಾಲಯದಲ್ಲೂ ವಿಶೇಷ ಪೂಜಾಕಾರ್ಯ ನೆರವೇರಿಸಲಾಗುತ್ತಿದೆ.

ಶಿವಾರ್ಚಕರಾದ‌ ಎಸ್.ಯೋಗಾನಂದ ಅವರ ಪುತ್ರ ಅಭಿನಂದನ್ ಅವರು ತಾಯಿ ಪಾರ್ವತಿಗೆ ವಿಶೇಷ ಅಲಂಕಾರ ಮಾಡಿದ್ದು ಭಕ್ತರ ಮನ ಸೂರೆಗೊಳ್ಳುತ್ತಿದೆ.

ನವರಾತ್ರಿ ಮೂರನೆ ದಿನವಾದ ಬುಧವಾರ ತಾಯಿ ಚಂದ್ರಘಂಟಾ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ತಾಯಿಯನ್ನು ನೋಡಲು ಎರಡು ಕಣ್ಣು ಸಾಲದು.

ಕಡಗೆಂಪು ಬಣ್ಣ‌ ಮತ್ತು ಚಿನ್ನದ ಬಾರ್ಡರಿನ ರೇಷ್ಮೆ ಸೀರೆ ತೊಟ್ಟಿರುವ ತಾಯಿ ಪಾರ್ವತಿಗೆ‌ ವಿವಿಧ ಹೂಗಳಿಂದ ಅಲಂಕರಿಸಲಾಗಿದೆ,
ಜತೆಗೆ ಬೆಳ್ಳಿಯ ಕೈಗಳು ಹಾಗೂ ತ್ರಿಶೂಲಧಾರಿಯಾಗಿ ಭವ್ಯವಾಗಿ ಕಾಣುತ್ತಾಳೆ.ನೂರಾರು ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆದರು.