ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಮೈಸೂರಿನ ವರುಣಾ ವಿಧಾನ ಸಭಾ ಕ್ಷೇತ್ರದ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜಮಂಗಲ, ಭುಗತ ಹಳ್ಳಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು.
ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು.
ಸಮೀಕ್ಷೆ ವೇಳೆ ಎದುರಾಗುವ ಸಮಸ್ಯೆಗಳ ಕುರಿತು ಗಣತಿದಾರರೊಂದಿಗೆ ಚರ್ಚಿಸಿ, ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮೈಸೂರು ತಹಶೀಲ್ದಾರ್ ಮಹೇಶ್, ಮೈಸೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಮೈಸೂರು ಗ್ರಾಮಾಂತರ ಬಿಇಒ ಪ್ರಕಾಶ್ ಹಾಗೂ ಪಿಡಿಒ ಹಾಜರಿದ್ದರು.