ಮೈಸೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಅರಮನೆ ಮುಂಭಾಗ ಇರುವ ಕೋಟೆ ಆಂಜನೇಯ ಸ್ವಾಮಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ನರಸಿಂಹಸ್ವಾಮಿ, ನಗರ ಕಾರ್ಯಾಧ್ಯಕ್ಷ ಎಸ್. ಪ್ರಕಾಶ್ ಪ್ರಿಯಾದರ್ಶನ್, ನಗರ ಮಹಿಳಾ ಅಧ್ಯಕ್ಷೆ ಪ್ರೇಮಾ ಶಂಕರಗೌಡ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಪಿ ಮಂಜುನಾಥ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಎಂ ಎನ್ ರಾಮು, ನಗರ ಪಾಲಿಕೆ ಮಾಜಿ ಸದಸ್ಯ ಎಸ್ ಬಿ ಎಂ ಮಂಜು, ಚಾಮರಾಜ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಶಿವರಾಜ್, ಬಿಜೆಪಿ ಚಾಮರಾಜ ಕ್ಷೇತ್ರದ ಎಸ್ ಸಿ ಮೋರ್ಚಾ ಅಧ್ಯಕ್ಷ ಹರೀಶ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೆಗೌಡ, ಜೆಡಿಎಸ್, ಬಿಜೆಪಿ ಮುಖಂಡರುಗಳಾದ ಸಚಿನ್, ಬಿ ಎಂ ಕೃಷ್ಣಗೌಡ ಕೆ ಆರ್ ನಗರ, ಸೊಸೈಟಿ ಲೋಕೇಶ್, ಕೋದಂಡ, ಜೆ ಪ್ರಕಾಶ್, ಶಿವಪ್ರಸಾದ್, ಸೋಮೇಗೌಡ, ಸೊಸೈಟಿ ವಿಜಿ, ಜಯರಾಮಗೌಡ ಮುಂತಾದರು ಹಾಜರಿದ್ದರು.