ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಮೈಸೂರು ನಗರ ಅಂತರ ಕಾಲೇಜು ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವರ್ಷ ಎಂ.ಎ, ರೀತು ಎ, ಪ್ರಿಯದರ್ಶಿನಿ ಎಚ್. ಪಿ ಕಾವೇರಿ ಬಿ ಎನ್, ಧನ್ಯಶ್ರೀ ಆರ್, ಪ್ರಥಮ ಸ್ಥಾನ ಗಳಿಸಿ ಪಾರಿತೋಷಕವನ್ನು ಪಡೆದಿದ್ದಾರೆ.
ಚೆಸ್ ಸ್ಪರ್ಧೆಯಲ್ಲಿ ಭವಾನಿ ಸಿ.ಎಸ್, ಹೇಮಲತಾ, ದೇವಿಕ, ಗೀತಪ್ರಿಯ, ಪೂರ್ವಿ ತೃತೀಯ ಸ್ಥಾನ ಪಡೆದಿದ್ದಾರೆ.
ಈ ಪಂದ್ಯಾವಳಿಯನ್ನು ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ, ಟೆರೇಷಿಯನ್ ಕಾಲೇಜು, ಎಂ ಐ ಟಿ ಕಾಲೇಜು ಇವರ ಸಹಯೋಗದೊಂದಿಗೆ ಕಾವೇರಿ ಯೂತ್ ಸ್ಪೋರ್ಟ್ಸ್ ಅಕಾಡೆಮಿ ಕಾವೇರಿ ಸ್ಕೂಲ್ ಕುವೆಂಪು ನಗರದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಯಲ್ಲಿ ಮೈಸೂರು ನಗರದ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಒಳಗೊಂಡಂತೆ ಸುಮಾರು 25 ತಂಡಗಳು ಭಾಗವಹಿಸಿದ್ದವು.
ವಿಜೇತ ಕ್ರೀಡಾಪಟುಗಳನ್ನು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ರಹಿಮಾನ್ ಎಂ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರತಿಮ ಕೆ ಆರ್ ಹಾಗೂ ಅಧ್ಯಾಪಕರು, ಅಧ್ಯಾಪಕೇತಕರು, ಸಿಡಿಸಿ ನೌಕರರು ಅಭಿನಂದಿಸಿದರು.