ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನ ಪೊಲೀಸರು ಚೇಸ್ ಮಾಡಿ 20 ಕಾರುಗಳನ್ನು ರಕ್ಷಣೆ ಮಾಡಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಪುರ ಪೊಲೀಸರಿಗೆ ಅಕ್ರಮವಾಗಿ ಜಾನುವಾರುಗಳನ್ನ ಸಾಗಿಸುತ್ತಿರುವ ಮಾಹಿತಿ ಬಂದಿದೆ.
ತಕ್ಷಣ ಅಲರ್ಟ್ ಆದ ಪಿಎಸ್ಸೈ ಹೇಮಾವತಿ ಅವರು ವಾಹನವನ್ನ ಸಿನಮೀಯ ಶೈಲಿಯಲ್ಲಿ ಚೇಸ್ ಮಾಡಿದ್ದಾರೆ.
ಜತೆಗೆ ಹೇಮಾವತಿಯವರು ಹುಲ್ಲಹಳ್ಳಿ ಪಿಎಸ್ಸೈ ಚೇತನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ.ಅಲರ್ಟ್ ಆದ ಚೇತನ್ ಕುಮಾರ್ ಸಹ ಸಿಬ್ಬಂದಿಗಳ ಸಮೇತ ಜಾನುವಾರುಗಳನ್ನ ಸಾಗಿಸುತ್ತಿದ್ದ ವಾಹನ ಹಿಡಿಯಲು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಇದರಿಂದ ಆತಂಕಗೊಂಡ ವಾಹನದಲ್ಲಿದ್ದವರು ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ, ಅಹಲ್ಯಾ ಗ್ರಾಮದ ಬಳಿ ಜಾನುವಾರುಗಳನ್ನ ತುಂಬಿದ್ದ ವಾಹನ ಉರುಳಿಬಿದ್ದಿದೆ.
ವಾಹನದಲ್ಲಿದ್ದವರು ತಪ್ಪಿಸಿಕೊಡಿದ್ದಾರೆ, ಕರುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೂಡಲೇ ಪೊಲೀಸರು ಸ್ಥಳೀಯರ ಸಹಾಯದಿಂದ 20 ಕರುಗಳನ್ನ ರಕ್ಷಿಸಿ ಪಿಂಜರಾಪೋಲ್ ಗೆ ರವಾನಿಸಿ ಬೊಲೆರೋ ವಾಹನ ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.