ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸಕ್ಕೆ ತೆರೆ

Spread the love

ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನ ಭಕ್ತಸಾಗರವೇ ಹರಿದು ಬಂದಿತ್ತು.

ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9:15 ರಿಂದ 9:55 ರ ಗಂಟೆಯಲ್ಲಿ ಸಲ್ಲುವ ಶುಭ ಲಗ್ನದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ಜರುಗಿತು.

ಸಂಜೆ 6:30 ರಲ್ಲಿ ಸಾಲೂರು ಮಠದ ಪೀಠಧ್ಯಕ್ಷರಾದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನಡೆಯಿತು.

ತೆಪ್ಪೋತ್ಸದ ವೇಳೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು.ತೆಪ್ಪೋತ್ಸವದ ಬಳಿಕ ದೀಪಾವಳಿ ಜಾತ್ರೆಗೆ ತೆರೆ ಬಿದ್ದಿತು.