ರೇಖಾ ಶ್ರೀನಿವಾಸ್ ಗೆ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್

Spread the love

ಮೈಸೂರು: ಮೈಸೂರಿನ ಕುವೆಂಪು ನಗರದ ನಿವಾಸಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಅವರಿಗೆ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ನೀಡಿ ಗೌರವಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ, ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ, ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಾಲುಮರದ ತಿಮ್ಮಕ್ಕ ಅಭಿನಂದನಾ ಸಮಿತಿ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ವೃಕ್ಷ ಮಾತೆ ಪದ್ಮಶ್ರೀ ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ಜನ್ಮದಿನದ ಸಂಭ್ರಮ ಹಮ್ಮಿಕೊಳ್ಳಲಾಯಿತು.

ಈ ವೇಳೆ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ
ರಾಜ್ಯಮಟ್ಟದ ಪ್ರಶಸ್ತಿಯನ್ನು ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಲು ಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ಅಧ್ಯಕ್ಷ ಉಮೇಶ್ (ಸಾಲುಮರದ ತಿಮ್ಮಕ್ಕನ ದತ್ತು ಪುತ್ರ), ಪ್ರಧಾನ ಕಾರ್ಯದರ್ಶಿ
ಎಲ್. ಪಿ.ಪ್ರಭಾಕರ್,ಸಾಲು ಮತದ ತಿಮ್ಮಕ್ಕ ಅಭಿನಂದನಾ ಸಮಿತಿ ಅಧ್ಯಕ್ಷ ಡಾ. ಹೇಮಂತ್ ಗೌಡ, ಶ್ರೀ ಸಿದ್ದಾರ್ಥ ಎಜುಕೇಷನ್‌ ಸೊಸೈಟಿ ಸದಸ್ಯರರಾದ ಪ್ರಭುವನ್, ಮನೋಜ್, ಅಭಿಶೇಕ್ ಮತ್ತಿತ್ತರು ಹಾಜರಿದ್ದರು.