ಬೆಂಗಳೂರು: ರಾಜ್ಯ ರಾಜ್ದಾನು ಟೆರರಿಸ್ಟ್ ಗಳಿಗೆ ಫೇವರಿಟ್ ಆಗಿದೆಯೆ ಎಂಬ ಅನುಮಾನ ಕಾಡುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಇಂದು ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿರುವುದು.
ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದು,ಸುದ್ದಿತಿಳಿದು ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ.
ಗಿರಿಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂಕಿತ ಉಗ್ರ.
ಉಗ್ರ ಗೌತಮ್ ಉಲ್ಫಾ ಸಂಘಟನೆಗೆ ಸೇರಿದವನು ಎಂಬುದು ಆರಂಭಿಕ ಮಾಹಿತಿಯಲ್ಲಿ ತಿಳಿದು ಗೊತ್ತಾಗಿದೆ.
ಗುವಾಹತಿಯಲ್ಲಿ ಐಇಡಿ ಬಾಂಬ್ ಇಟ್ಟು ಬೆಂಗಳೂರಿಗೆ ಫ್ಯಾಮಿಲಿ ಸಮೇತ ಬಂದಿದ್ದ ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಗೌತಮ್ ಎನ್ನುವ ಹೆಸರಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್ಐಎ ತಂಡ ಈತನನ್ನು ಸೆರೆ ಹಿಡಿದಿದೆ.
ಶಂಕಿತ ಉಗ್ರ ಬೆಂಗಳೂರಿನಲ್ಲೂ ಕೂಡ ವಿಧ್ವಂಸಕಾರಿ ಕೃತ್ಯಕ್ಕೆ ಯೋಜನೆ ನಡೆಸಿದ್ದ ಎಂಬ ತಿಳಿದು ಬಂದಿವೆ. ಬಂಧಿತನಿಂದ ಮೊಬೈಲ್ ಮತ್ತು ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.