ಮೈಸೂರು,ನವೆಂಬರ್. ೧: ಮೈಸೂರಿನ
ಚಾಮರಾಜ ಜೋಡಿ ರಸ್ತೆಯಲ್ಲಿರುವ ಮಯೂರ ಕನ್ನಡ ಯುವಕರ ಬಳಗ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಧ್ವಜಾರೋಹಣ ಮಾಡಲಾಯಿತು.
ಈ ವೇಳೆ ವರನಟ ಡಾ. ರಾಜಕುಮಾರ್, ಹಾಗೂ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಜಿ ಶ್ರೀನಾಥ್ ಬಾಬು, ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ , ಜಿ ರಾಘವೇಂದ್ರ,ಎಸ್ ಎನ್ ರಾಜೇಶ್, ಕಿರಣ್, ಅರುಣ್, ಮಂಜುನಾಥ್,ಸತೀಶ್, ಹರೀಶ್ ನಾಯ್ಡು, ಅಭಿಲಾಶ್, ಸದಾಶಿವ್ ಮತ್ತಿತರರು ಹಾಜರಿದ್ದರು.

