ತುಳಸಿ ಗಿಡ ಅನೇಕ ರೋಗಗಳಿಗೆ ಮದ್ದು:ಕೃಷ್ಣಮೂರ್ತಿ

Spread the love

ಮೈಸೂರು,ನ.2 : ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹಾಗೂ ತುಳಸಿ ಹಬ್ಬದ ಪ್ರಯುಕ್ತ
ತುಳಸಿ ಕಟ್ಟೆಗೆ ವಿಶೇಷವಾಗಿ ಅಲಂಕರಿಸಿ ಪೂಜೆ ನೆರವೇರಿಸಲಾಯಿತು.

100 ತುಳಸಿ ಗಿಡಗಳನ್ನು ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರು, ತುಳಸಿಗಿಡವು
ಹಿಂದೂ ಧರ್ಮದ ಜನರಿಗೆ ಅವಿಭಾಜ್ಯ ಅಂಗ ಮತ್ತು ಇದನ್ನು ಮನೆಯಲ್ಲಿ ಬೆಳೆಸಿ ಬಳಸಿದರೆ ವಿವಿಧ ಕಾಯಿಲೆಗಳು ಬರುವುದಿಲ್ಲ ಎಂದು ತಿಳಿಸಿದರು.

ತುಳಸಿಗಿಡವು ಯಥೇಚ್ಛವಾಗಿ ಆಮ್ಲಜನಕವನ್ನು ಉತ್ಪತ್ತಿ ಮಾಡುತ್ತದೆ ಹಾಗೂ ತಿಳಿಸಿ ಗಿಡದಿಂದ ಅನೇಕ ಉಪಯೋಗಗಳು ಇವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಜಿ ರಾಘವೇಂದ್ರ, ಎಸ್ ಎನ್ ರಾಜೇಶ್ ಹಾಗೂ ಅನೇಕ ಭಕ್ತರು ಹಾಜರಿದ್ದರು.