ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ:ಬೆಂಗಳೂರಿಗೆ ಅನ್ಯಾಯ-ಅಶೋಕ್

Spread the love

ಬೆಂಗಳೂರು: ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಮುಸುಕಿನ ಗುದ್ದಾಟದಲ್ಲಿ ಬೆಂಗಳೂರಿಗೆ ಮತ್ತೊಮ್ಮೆ ಅನ್ಯಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ನಲ್ಲಿ ಅರ್ಧದಷ್ಟು ಹಣವನ್ನ ನಗರಾಭಿವೃದ್ಧಿ ಇಲಾಖೆ ಕಡಿತಗೊಳಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ಅನ್ನೇ ಕೊಡಿಸಲು ಆಗದ ನಿಮಗೆ ಕೇಂದ್ರ ಸರ್ಕಾರವನ್ನ ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಟ್ವೀಟ್ ಮಾಡಿ ಅಶೋಕ್ ಪ್ರಶ್ನಿಸಿದ್ದಾರೆ.

ನಿಮಗೆ ನಿಜವಾಗಿಯೂ ಬೆಂಗಳೂರಿನ ಬಗ್ಗೆ ಬದ್ಧತೆ ಇದ್ದರೆ, ಪೂರ್ತಿ ಅನುದಾನವನ್ನು ಬಿಡುಗಡೆ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.