ಮೈಸೂರು: ಶ್ರೀ ಸಂತ ಕನಕದಾಸರ 525 ನೇ ಜಯಂತಿಯನ್ನು ಕೃಷ್ಣರಾಜ ಕ್ಷೇತ್ರದ ಬಂಡಿಕೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಬಂಡಿಕೇರಿಯಲ್ಲಿರುವ ಕನಕದಾಸರ ಪುತ್ಥಳಿಗೆ ಕಾಗಿನೆಲೆ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮಾಲಾರ್ಪಣೆ ಮಾಡಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ.ನವೀನ್ ಕುಮಾರ್,ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರದೀಪ್ ಕುಮಾರ್,ಗೋಪಿ,
ಮುಖಂಡರುಗಳಾದ ಪುನೀತ್,ರಮೇಶ್,
ಸತ್ಯನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.
