ಚಳಿಗಾಲದ ಅಧಿವೇಶನ:ಸರ್ಕಾರಕ್ಕೆ ಪ್ರತಿಭಟನೆ ಬಿಸಿ-ಸ್ಥಳ ವೀಕ್ಷಿಸಿದ ಪೊಲೀಸರು

ಬೆಳಗಾವಿ: ಸೋಮವಾರದಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.
ಸುವರ್ಣಸೌಧದ ಬಳಿ
ಡಿಸೆಂಬರ್ 9 ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ನಗರ ಪೊಲೀಸರು ಬಿಜೆಪಿ‌ ಮುಖಂಡರೊಂದಿಗೆ ಸ್ಥಳ ಪರಿಶೀಲಿಸಿದರು.
ರೈತರ ಜಟಿಲ ಸಮಸ್ಯೆಗಳು ಹಾಗೂ ಉತ್ತರ ಕರ್ನಾಟಕ ಭಾಗದ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು ಎಂದು ಬಿಜೆಪಿ ಒತ್ತಾಯಿಸಿ ಸುವರ್ಣಸೌಧ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.
ಪ್ರತಿಭಟನೆ ನಡೆಯಲಿರುವ ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಬಾರಾಯಣ ಭರಮನಿ ಹಾಗೂ ಹಿರಿಯ ಅಧಿಕಾರಿಗಳು ಮತ್ತು
ಬಿಜೆಪಿ ನಾಯಕರು ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.
ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ ಹಾಜರಿದ್ದರು.