ಶೆಡ್ ನಲ್ಲಿ ಬೆಂಕಿ:55 ಲಕ್ಷ ರೂ ಮೌಲ್ಯದ ಕೊಬ್ಬರಿ ನಾಶ

ಮಂಡ್ಯ‌: ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಪುಟ್ಟೇಗೌಡರ ಪುತ್ರ ಜಿ.ಪಿ.ಪ್ರಸನ್ನ ಅವರು ಕಾಯಿ ವ್ಯಾಪಾರಿಯಾಗಿದ್ದು, ಕೊಬ್ಬರಿ ಖರೀದಿಸಿ ತಮ್ಮ ಶೆಡ್ಡನಲ್ಲಿ ಇಟ್ಟಿದ್ದರು ಬುಧವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಕೊಬ್ಬರಿ ಜತೆಗೆ ಶೆಡ್ ನಲ್ಲಿದ್ದ ಎಲ್ಲಾ ವಸ್ತುಗಳು ನಾಶವಾಗಿದೆ.12 ಟನ್ ಕೊಬ್ಬರಿ ಸೇರಿ ಸುಮಾರು 55 ಲಕ್ಷ ರೂ.ನಷ್ಟವಾಗಿದೆ
ಕಿಡಿಗೇಡಿಗಳ ಕೃತ್ಯವೋ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೊ ತಿಳಿದುಬಂದಿಲ್ಲ.

ವಿಷಯ ತಿಳಿದು ಎರಡು ಅಗ್ನಿಶಾಮಕದಳ ತಂಡದ ಸಿಬ್ಬಂದಿಗಳ ಸತತ ಪ್ರಯತ್ನದಿಂದಾಗಿ ಬೆಂಕಿ ನಂದಿಸಿದರು.

ಮಧ್ಯಮ ಕುಟುಂಬ ವರ್ಗದ ಜಿ.ಪಿ.ಪ್ರಸನ್ನ ಅವರು ಕೊಬ್ಬರಿ, ಕಾಯಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು.ಈ ಅವಘಡದಿಂದ ಅವರು ಆತಂಕಗೊಂಡಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿ ಸಹಾಯಕ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.