ಬೆಂಗಳೂರು: ನಟ ದರ್ಶನ್ ತೂಗುದೀಪ ಅಭಿನಯದ ದಿ ಡೆವಿಲ್ ಚಿತ್ರ ಗುರುವಾರ ತೆರೆ ಕಂಡಿದ್ದು,ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಅಭಿಮಾನಿಗಳು ಚಿತ್ರಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದಿ ಡೆವಿಲ್’ ನ ರೇಟಿಂಗ್ ಮತ್ತು ವಿಮರ್ಶೆಗಳನ್ನು ಬುಕ್ ಮೈ ಶೊ ನಂತಹ ಕೆಲ ವೇದಿಕೆಗಳಲ್ಲಿ ತಿಳಿಸುವಂತಿಲ್ಲ.
ಅಭಿಮಾನಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಕುರಿತು ಚಿತ್ರ ವೀಕ್ಷಿಸಿದ ಬಳಿಕ ದರ್ಶನ್ ಸಹೋದರ, ನಿರ್ದೇಶಕ ದಿನಕರ್ ತೂಗುದೀಪ ಮಾತನಾಡಿ, ನೆಗೆಟಿವ್ ವಿಮರ್ಶೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಅದನ್ನು ಆಫ್ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ದುಡ್ಡು ಕೊಟ್ಟು ರೇಟಿಂಗ್ ಮಾಡಿಸೋ ಕೆಲಸ ಆಗುತ್ತಿದೆ. ಈ ಮೂಲಕ ಸಿನಿಮಾ ಸಂಸ್ಕೃತಿಯನ್ನು ಹಾಳು ಮಾಡುವ ಕೆಲಸ ಮಾಡಲಾಗುತ್ತಿದೆ ನನ್ನ ರಾಯಲ್ ಸಿನಿಮಾಗೂ ಇದೇ ಅನುಭವ ಆಗಿದೆ ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ದರ್ಶನ್ ನಟನೆಯ ಡೆವಿಲ್ ಚಿತ್ರ ಬಿಡುಗಡೆ-ಭರ್ಜರಿ ರೆಸ್ಪಾನ್ಸ್