ಮೈಸೂರು: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳೆಯರ ಚಾಂಪಿಯನ್ ಶಿಪ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡವು ತೃತೀಯ ಸ್ಥಾನದೊಂದಿಗೆ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಗೆ ಆಯ್ಕೆಯಾಗಿದೆ.
31.03.2026 ರಿಂದ 04.04.2026 ರವರೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಸುಮಾರು 80 ವಿದ್ಯಾನಿಲಯವು ಭಾಗವಹಿಸಿದ್ದವು.
ಈ ಸ್ಪರ್ಧೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡವು ಲೀಗ್ ಹಂತದ ಪಂದ್ಯಾವಳಿಯಲ್ಲಿ 11-9 ರಿಂದ ಕ್ಯಾಲಿಕಟ್ ವಿಶ್ವವಿದ್ಯಾನಿಲಯ ತಂಡವನ್ನು ಮಣಿಸಿ, ಈ ಮೂಲಕ ಮೂರನೇ ಸ್ಥಾನ ಗಳಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಗೆ ಅರ್ಹತೆ ಗಳಿಸಿದೆ.
ತಂಡದ ನಾಯಕಿಯಾಗಿ ನಾಗಲಾಂಬಿಕ ತಂಡದ ವ್ಯವಸ್ಥಾಪಕರಾಗಿ ಮಹಾರಾಣಿ ಮಹಿಳಾ ಕಲಾ ಕಾಲೇಜು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಭಾಸ್ಕರ್ ಕೆ ಎಸ್ ಹಾಗೂ ತರಬೇತುದಾರರಾಗಿ ಕಾಂತರಾಜು ಬಿ.ಡಿ ಕಾರ್ಯನಿರ್ವಹಿಸಿದರು.
ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯು ಎಸ್.ಎನ್.ಡಿ.ಟಿ ಮಹಿಳಾ ವಿಶ್ವವಿದ್ಯಾನಿಲಯ, ಮುಂಬೈನಲ್ಲಿ ಏಪ್ರಿಲ್
19 ರಿಂದ 23 ರವರೆಗೆ ನಡೆಯಲಿದ್ದು,
ಸ್ಪರ್ಧೆಯಲ್ಲಿ ಮೈಸೂರು ವಿವಿ ತಂಡ ಭಾಗವಹಿಸಲಿದೆ.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಈ ವಿಜೇತ ತಂಡವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್, ಕುಲಸಚಿವರಾದ ಸವಿತ ಎಂ ಕೆ ಹಾಗೂ ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕ ಪ್ರೊ. ಹೆಚ್ ಸಿ ರೇವಣ್ಣ ಸಿದ್ದಪ್ಪ ಅವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
