ಜಂಬೂಸವಾರಿ ಮೆರವಣಿಗೆಗೆ ಮೆರಗು ತಂದಸ್ತಬ್ಧಚಿತ್ರ,ಜಾನಪದ ಕಲೆ

Spread the love

ಮೈಸೂರು: ಈ ಬಾರಿ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಸಾಗಿದ ಸ್ತಬ್ಧಚಿತ್ರ ಮೆರವಣಿಗೆ‌ ಹಾಗೂ ಕಲೆಗಳು ವಿಶೇಷವಾಗಿತ್ತು.

ಇದೇ ಮೊದಲ ಬಾರಿಗೆ 31 ಜಿಲ್ಲೆಗಳಿಂದ 51 ಕಲಾಕೃತಿಗಳು ಭಾಗವಹಿಸಿ ನೋಡುಗರ ಕಣ್ಮನ ಸೆಳೆದವು.

ಕೋಲಾರದ ಕೋಟಿಲಿಂಗೇಶ್ವರ ದೇವಸ್ಥಾನ, ದಕ್ಷಿಣ ಕನ್ನಡದ ಕರಾವಳಿಯ ವಾಣಿಜ್ಯ ಮತ್ತು ಪ್ರವಾಸೋದ್ಯಮ, ಹಾಸನ ಜಿಲ್ಲೆಯ ವಿಶ್ವಪರಂಪರೆಯ ಬೇಲೂರು ಚೆನ್ನಕೇಶವ ದೇವಾಲಯ, ಹಳೆಬೀಡು ಹೊಯ್ಸಳೇಶ್ವರ ದೇವಾಲಯ, ದಾವಣಗೆರೆ ಜಿಲ್ಲೆಯ ನಾವು ಮನುಜರು, ಗದಗ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು

ಪಂಚಾಯತ್‌ರಾಜ್ ವಿಶ್ವವಿದ್ಯಾಲಯ, ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನ, ಕಿನ್ನಾಳೆ ಕಲೆ, ಇಟಗಿ ದೇವಸ್ಥಾನ, ಬೀದರ್ ಜಿಲ್ಲೆಯ ಚೆನ್ನ ಬಸವಪಟ್ಟ ದೇವರು, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡನ್ನೊಮ್ಮೆ ಬಂದು ನೋಡು, ಕೊಡಗು ಜಿಲ್ಲೆಯ

ಭೂಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ, ಕಾಳುಮೆಣಸು, ಆನೆ ಕ್ಯಾಂಪ್, ಮುಖ್ಯಮಂತ್ರಿಯ ತವರು ಜಿಲ್ಲೆಯಿಂದ ಮನುಷ್ಯ ಜಾತಿ ತಾನೊಂದೇ ವಲಂ, ಸಂಸತ್ ಭವನ, ಅನುಭವ ಮಂಟಪ, ಬುದ್ಧ, ಬಸವ, ಅಂಬೇಡ್ಕರ್ ಅವರ ಮಾದರಿಗಳು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದೇವಸ್ಥಾನ ಹಾಗೂ ಶಿವನ ಸ್ತಬ್ಧಚಿತ್ರ,ಜಂಬೂ ಸವಾರಿ ಮೆರವಣಿಗೆಯ ಸ್ತಬ್ಧಚಿತ್ರಗಳು ಎಲ್ಲರ ಮನಸೆಳೆದವು.

ಜಂಬೂಸವಾರಿ‌ ಮೆರವಣಿಗೆಗೆ ಜಾನಪದ ಕಲಾಕಾರರು ಮೆರಗು ನೀಡಿದರು.