ಮೈಸೂರು: ಕುಡಿದ ಮತ್ತಲ್ಲಿ ಬಾಮೈದನನ್ನು ಭಾವ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದೆ.
ಮೈಸೂರಿನ ಮೇಟಗಳ್ಳಿಯಲ್ಲಿ ಈ ಘಟನೆ ನಡೆದಿದ್ದು,ಮೈಸೂರು ಜಿಲ್ಲೆ
ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ.ಮನೋಜ್ ( 26) ಕೊಲೆಯಾದ ದುರ್ದೈವಿ.ವಿನೋದ್ ಬಾಮೈದನನ್ನ ಕೊಲೆಗೈದ ಬಾವ.
ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು.ಕುಡಿದು ಮನೋಜ್ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ,
ಮನೋಜ್ ನ ಉಪಟಳ ತಾಳಲಾರದೆ ವಿನೋದ್ ಕೊಲೆ ಮಾಡಿದ್ದಾನೆ.
ಟ್ರೂ ಸ್ಪಿರಿಟ್ ಬಾರ್ ನಲ್ಲಿ ಕುಡಿದು ಗಲಾಟೆ ನಡೆದ ನಂತರ ವಿನೋದ್ ಈ ಹತ್ಯೆ ಮಾಡಿದ್ದಾನೆ.
ಬಾರ್ ನಲ್ಲಿ ರೂಮ್ ಬಾಡಿಗೆ ಪಡೆದು ಬಾವಾ,ಬಾಮೈದನ ಜೊತೆಯಲ್ಲೆ ಕುಡಿದಿದ್ದಾರೆ.ಕಂಠಪೂರ್ತಿ ಕುಡಿಸಿ ಪ್ರಜ್ಞೆ ತಪ್ಪಿದ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಾವ ವಿನೋದ್ ಪರಾರಿಯಾಗಿದ್ದಾನೆ.
ಮೇಟಗಳ್ಳಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಿನೋದ್ ಬಂಧನಕ್ಕೆ ಬಲೆ ಬೀಸಿದ್ದಾರೆ.