ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯವರು ರಾಜಕೀಯಕ್ಕಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜತೆ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಸಿಎಂ,ಸತೀಶ್ ಜಾರಕಿಹೊಳಿ ಹಿರಿಯ ಸಚಿವರು,ರಾಜಕಾರಣದ ಜತೆಗೆ ವ್ಯವಹಾರ ಮತ್ತು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಅವರು ಕಾನೂನಿನ ಚೌಕಟ್ಟಿನಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ಇಡಿ ಕೇಳುವ ಪ್ರಶ್ನೆಗಳಿಗೆ ಸತೀಶ್ ಜಾರಕಿಹೊಳಿ ಸೂಕ್ತ ಉತ್ತರ ನೀಡುತ್ತಾರೆ ಹಾಗಾಗಿ ಯಾರೂ ಗಾಬರಿಯಾಗಬೇಕಿಲ್ಲ. ಸಂಬಂಧಿಕರ ವ್ಯವಹಾರಗಳ ಬಗ್ಗೆ ನಮಗೆ ಗೊತ್ತಿಲ್ಲ. ಆದರೆ ಸತೀಶ್ ಜಾರಕಿಹೊಳಿ ಪ್ರಾಮಾಣಿಕ ರಾಜಕಾರಣಿ, ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳಲಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಸಂದರ್ಭದಲ್ಲಿ ಇಂತಹ ತನಿಖಾ ಕ್ರಮಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶದಿಂದ. ನಮ್ಮ ಸರ್ಕಾರ ಮತ್ತು ಪಕ್ಷವನ್ನು ಎಲ್ಲ ಕಡೆಗಳಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. 100 ದಿನಗಳ ಸಂದರ್ಭದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗಿದೆ ಎಂದು ಸಿಎಂ ದೂರಿದರು.
ಸತೀಶ್ ಜಾರಕಿಹೊಳಿ ಅವರು ಪ್ರಬಲವಾಗಿ ಬೆಳೆಯುತ್ತಿರುವ ನಾಯಕನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಅವರನ್ನು ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆಯನ್ನು ಸಹಿಸಿಕೊಳ್ಳಲು ಆಗದೆ ತೊಂದರೆ ಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಅವರಿಗೆ ತಿರುಗುಬಾಣವಾಗಲಿದೆ. ನನ್ನ ಮೇಲೂ ದಾಳಿ ಮಾಡಿ ಬಂಧಿಸಿದ್ದರು. ಆದರೆ ಇಂದು ಏನಾಗಿದೆ ನಾನು ರಾಜ್ಯದ ಸಿಎಂ ಆಗಿರುವೆ ಎಂದು ಕಡಕ್ಕಾಗಿ ಡಿಕೆಶಿ ಹೇಳಿದರು.
ಮೊದಲು ನಾಗೇಂದ್ರ ಅವರ ಮೇಲೆ ದಾಳಿ ಮಾಡಿದರು. ನಾನು ಈ ಪ್ರಕರಣ ಪರಿಶೀಲನೆ ಮಾಡಿದೆ. ಯಾವುದೇ ತಪ್ಪು ಮಾಡಿರಲಿಲ್ಲ. ತನಿಖೆ ಮಾಡಿಸಿದ್ದೇವೆ. ಬ್ಯಾಂಕ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದು ನಾವೆ. ಆ ಹಣವನ್ನು ವಾಪಸ್ ಪಡೆಯಲಾಗಿದೆ. ಇಡಿ, ಸಿಬಿಐ ಕೈಲಿ ಒಂದು ರೂ ವಾಪಸ್ ಪಡೆಯಲು ಆಗಿಲ್ಲ. 84 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದ್ದರು. ಬಳಿಕ ಸಿಐಡಿ ಹಾಗೂ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿ 79 ಕೋಟಿ ಹಣವನ್ನು ವಾಪಸ್ ಪಡೆದಿದ್ದಾರೆ. ಇನ್ನೂ 5 ಕೋಟಿ ಮಾತ್ರ ಬಾಕಿ ಉಳಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ ಬಳಿಕವೂ ಈ ವಿಚಾರವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು.
ತನಿಖೆ ನಡೆಸಿ ಕ್ರಮ ಕೈಗೊಂಡಿರುವ ಸರ್ಕಾರದ ವಿರುದ್ಧವೇ ಬಿಜೆಪಿ ರಾಜಕೀಯ ಆರೋಪ ಮಾಡುತ್ತಿರುವುದು ಸರಿಯಲ್ಲ. ಈಗ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಿಂದೆ ಬಿದ್ದಿದ್ದಾರೆ. ಕೆಪಿಎಸ್ ಸಿ ವಿಚಾರದಲ್ಲಿ ಅವರನ್ನು ನೇಮಕ ಮಾಡಿದ್ದು ಯಾರು ಈಗ ನಾನು ಈ ಬಗ್ಗೆ ಮಾತನಾಡುವುದಿಲ್ಲ, ತನಿಖೆ ನಡೆಯಲಿ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇನ್ನೂ ಹಲವು ಕಾಂಗ್ರೆಸ್ ನಾಯಕರು, ಸಚಿವರು ಮತ್ತು ಶಾಸಕರ ಮೇಲೂ ತನಿಖಾ ಸಂಸ್ಥೆಗಳ ಕ್ರಮ ನಡೆಯುವ ಸಾಧ್ಯತೆ ಇದೆ. ಪಕ್ಷದ ಎಲ್ಲ ಶಾಸಕರು ಮತ್ತು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ತನಿಖೆಗೆ ನಾವು ಹೆದರುವುದಿಲ್ಲ. ಆದರೆ ಸುಳ್ಳು ಕಥೆ ಕಟ್ಟುವುದು, ಸುಳ್ಳು ಆರೋಪ ಮಾಡುವುದು ಹಾಗೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಖಂಡಿಸುತ್ತೇವೆ. ಬಿಜೆಪಿ ನಾಯಕರ ವಿರುದ್ಧ ಮಾತ್ರ ಯಾವುದೇ ದಾಳಿ ನಡೆಯುವುದಿಲ್ಲ. ಬೋವಿ ಹಗರಣದ ಬಗ್ಗೆ ಇಡಿ ಅವರು ಯಾಕೆ ಪ್ರವೇಶ ಮಾಡಲಿಲ್ಲ. ಬಿಡದಿ, ನೈಸ್ ಯೋಜನೆಗೆ ಸಹಿ ಹಾಕಿ ಆರಂಭಿಸಿದವರು ಅವರೇ ಆದರೆ ಆರೋಪ ಮಾಡುವುದು ನಮ್ಮ ವಿರುದ್ಧ ಸತ್ಯ ಆಚೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಖಂಡಿತಾಹೌದು. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಉತ್ತರಿಸಿದರು.
ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರವಾಗಿ ಮಾತನಾಡಿದ್ದರಲ್ಲಿ ತಪ್ಪಾ? ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ಮಾತನಾಡದೇ, ಬಿಜೆಪಿಯವರು ಮಾತನಾಡುತ್ತಾರೆಯೇ, ದೇಶದ ನಾಯಕ ಒಂದು ವೇದಿಕೆಯಲ್ಲಿ ಭಾಷಣ ಮಾಡಿದಾಗ, ಆ ಜಾಗವನ್ನು ಶುದ್ಧ ಮಾಡುತ್ತೇವೆ ಎನ್ನುವುದು ಮಾನವೀಯತೆಯೇ, ನಮ್ಮ ಸರ್ಕಾರ ಪೌರ ಕಾರ್ಮಿಕರ ಪುತ್ರನನ್ನು ಮುಜರಾಯಿ ಸಚಿವರನ್ನಾಗಿ ಮಾಡಿದೆ. ದೇವರು ಎಲ್ಲರಿಗೂ ಸೇರಿದವನು, ಅವನು ಯಾರ ಮನೆಯ ಸ್ವತ್ತಲ್ಲ. ಭಗವಂತ ಎಲ್ಲ ಜಾತಿವರ್ಗದವನಿಗೂ ಸೇರಿದವನು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಜೆಪಿ ನೂರು ಪ್ರತಿಭಟನೆ ಮಾಡಲಿ, ನೂರು ಓಡಾಟ ಮಾಡಲಿ, ನೂರು ಪತ್ರಿಕಾಗೋಷ್ಠಿ ನಡೆಸಲಿ,ಯಾರಿಗೆ ಏನು ಮಾಡಬೇಕೋ ಮಾಡಲಿ, ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
ವಿಪಕ್ಷಗಳ ಟೀಕೆಗಳು ಹಾಗೂ ತನಿಖಾ ಕ್ರಮಗಳು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಎಚ್ಚರಿಕೆಯಿಂದ ಇರುವಂತೆ ಮಾಡುತ್ತವೆ. ನಮಗೆ ಹೆಚ್ಚು ವಿರೋಧಿಗಳು ಇದ್ದಷ್ಟೂ ನಾವು ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಟಾಂಗ್ ನೀಡಿದರು.
ಗೃಹ ಸಚಿವ ಪ್ರಿಯಾಂಕ್ ಖರ್ಗೆವರು ಕೆಪಿಎಸ್ ಸಿ ಹಗರಣದ ಬಗ್ಗೆ ಮುತುರ್ವಜಿ ವಹಿಸಿ ಹಲವು ದಾಖಲೆಗಳನ್ನು ಕ್ರೋಢೀಕರಿಸಿದ್ದಾರೆ. ಆದರೆ ಜನತಾದಳದ ನಾಯಕರಿಗೆ ಕೆಪಿಎಸ್ ಸಿ ಪರೀಕ್ಷೆಯ ಒಎಂಆರ್ ಶೀಟ್ ಸಿಗಲು ಹೇಗೆ ಸಾಧ್ಯವಾಯಿತು ಜನತಾದಳದ ನಾಯಕರಿಗೂ ಈ ಪ್ರಕರಣಕ್ಕೂ ಸಂಬಂಧವಿರಬಹುದು. ಅವರು ನಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ಅವರ ಬಳಿ ಇರುವ ದಾಖಲೆಗಳನ್ನು ನೀಡಲಿ. ಅದಕ್ಕೆ ತಕ್ಕ ಉತ್ತರವನ್ನು ನೀಡಲು ನಾವು ಸಿದ್ಧರಿದ್ದೇವೆ. ಈ ಪ್ರಕರಣದಲ್ಲಿ ತಪ್ಪೆಸಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನಿನ ಚೌಕಟ್ಟನ್ನು ಮೀರಿ ನಾವು ಯಾರಿಗೂ ಸಹಾಯ ಮಾಡಿಲ್ಲ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು. ನಮಗೆ ದೇಶ ಹಾಗೂ ರಾಜ್ಯದ ಹಿತಾಸಕ್ತಿ ಪ್ರಮುಖವಾಗಿದೆ ಎಂದು ಸಿಎಂ ಹೇಳಿದರು.
