ಮೈಸೂರು: ನಾಡಿನ ಭವಿಷ್ಯದ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 53 ದಿನ ನಡೆದ ಕೆ- ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ವಿಧ್ಯಾರ್ಥಿಗಳಿಗೆ ಶುಭಹಾರೈಸಿ ಮಾತನಾಡಿದರು.
ಯಾವುದೇ ಪ್ರತಿಫಲಾಪೇಕ್ಷವಿಲ್ಲದೆ, ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಿ. ನೀವು ಗುರುಗಳಾಗಿ ನಿಮ್ಮಿಂದ ತಿದ್ದುವ ವಿದ್ಯಾರ್ಥಿಗಳಿಗೆ ಸರಿ ದಾರಿ ತೋರಿಸಿ ಎಂದು ಸಲಹೆ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅಧ್ಯಯನ ಪುಸ್ತಕ ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ ಅವರು ಎಲ್ಲಾ ಭವಿಷ್ಯದ ಪ್ರಾಧ್ಯಾಪಕರಿಗೆ ಶುಭಾಶಯ ತಿಳಿಸಿದರು.
ವಿ.ವಿ. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ, ಪರೀಕ್ಷಾಂಗ ಕುಲಸಚಿವ ಪ್ರೊ. ಹೆಚ್. ವಿಶ್ವನಾಥ್, ಡೀನ್ ಶೈಕ್ಷಣಿಕ ಪ್ರೊ. ರಮಾನಾಥಂ ನಾಯ್ಡು, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಪ್ರಾಧ್ಯಾಪಕರಾದ ಡಾ. ಶೆಲ್ಪಪಿಳ್ಳೆ ಅಯ್ಯಂಗಾರ್, ಡಾ. ಶೈಲೇಶ್ ರಾಜೇ ಅರಸ್, ಡಾ. ಜ್ಯೋತಿಶಂಕರ್, ವಿಶೇಷಾಧಿಕಾರಿ ಮಹದೇವ, ಹಿರಿಯ ಪ್ರಾಧ್ಯಾಪಕ ಎನ್.ಎನ್ ಪ್ರಹ್ಲಾದ, ಸಿಬ್ಬಂದಿಗಳಾದ ಗಣೇಶ್ ಕೆ.ಜಿ. ಕೊಪ್ಪಲ್ ಮತ್ತು ಸಿದ್ಧೇಶ್ ಹೊನ್ನೂರು ಮತ್ತತರರು ಹಾಜರಿದ್ದರು.